ದಂಡಕಾರಣ್ಯದಲ್ಲಿ ಅಪರೂಪಕ್ಕೆ ಕತ್ತೆಕಿರುಬದ ದರ್ಶನ
Rare sighting of a hyena in Dandakaranya
ಕಾರವಾರ 05: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕಾಡುಗಳಲ್ಲಿ ಅಪರೂಪಕ್ಕೆ ಕಾಣಸಿಗುವ ಕತ್ತೆಕಿರುಬದ ದರ್ಶನವಾಗಿದೆ. ಕೆಲವೇ ದಿನಗಳ ಹಿಂದೆ ಕುಳಗಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಕತ್ತೆಕಿರುಬ ಕಾಣಿಸಿಕೊಂಡಿದ್ದು ಸುದ್ಧಿಯಾಗಿತ್ತು. ಆದರೆ ಈ ಹಿಂದೆ ದಾಂಡೇಲಿಯ ಕಾಡುಗಳಲ್ಲಿ ಕತ್ತೆಕಿರುಬವನ್ನು ಯಾರು ನೋಡಿದ ಬಗ್ಗೆ ಮಾಹಿತಿ ಇಲ್ಲ. ಇಲ್ಲಿಗೆ ಕತ್ತೆಕಿರುಬ ಹೇಗೆ ಬಂತು ಎನ್ನುವದು ಯಕ್ಷಪ್ರಶ್ನೆಯಾಗಿದೆ.
ಇದೀಗ ಬುಧವಾರ ಬೆಳಗಿನ ಜಾವ ಗಣೇಶ ಗುಡಿಯ ಸೇತುವೆ ಬಳಿ ಕತ್ತೆಕಿರುಬ ವೊಂದು ಕಾಣಿಸಿಕೊಂಡಿದ್ದು, ಸದ್ಯ ಮೊಬೈಲ್ ನಲ್ಲಿ ಸ್ಥಳೀಯರೊಬ್ಬರು ಸೆರೆಹಿಡಿದಿದ್ದಾರೆ. ಪ್ರಾಣಿ ಮತ್ತು ಮಾನವ ಸಂಘರ್ಷ ಹೆಚ್ಚಾಗಿದ್ದು, ಒಂದೆಡೆ ಹುಲಿ, ಚಿರತೆಗಳ ದರ್ಶನವಾದರೆ ಇನ್ನೊಂದಡೆ ಕತ್ತೆಕಿರುಬ ಕಾಣಿಸಿಕೊಂಡಿದೆ. ಕೊಳೆತ ಪ್ರಾಣಿ ತಿಂದು ಕಾಡು ಸ್ವಚ್ಛ ಮಾಡುವ ಈ ಪ್ರಾಣಿ ಮನುಷ್ಯನಿಗೆ ತೀರಾ ಅಪಾಯಕಾರಿಯಲ್ಲ. ಆದರೆ ಜಾಗೃತೆ ಯಿಂದಿರುವದು ಒಳಿತು. ಬರಲಿರುವ ದಿನಗಳಲ್ಲಿ ಪ್ರವಾಸಿ ಪ್ರಾಣಿಪ್ರಿಯರಿಗೆ ಅಪರೂಪದ ಕತ್ತೆಕಿರುಬಗಳ ದರ್ಶನವಾಗಲೂ ಬಹುದು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 