ದಂಡಕಾರಣ್ಯದಲ್ಲಿ ಅಪರೂಪಕ್ಕೆ ಕತ್ತೆಕಿರುಬದ ದರ್ಶನ
Rare sighting of a hyena in Dandakaranya
ಕಾರವಾರ 05: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕಾಡುಗಳಲ್ಲಿ ಅಪರೂಪಕ್ಕೆ ಕಾಣಸಿಗುವ ಕತ್ತೆಕಿರುಬದ ದರ್ಶನವಾಗಿದೆ. ಕೆಲವೇ ದಿನಗಳ ಹಿಂದೆ ಕುಳಗಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಕತ್ತೆಕಿರುಬ ಕಾಣಿಸಿಕೊಂಡಿದ್ದು ಸುದ್ಧಿಯಾಗಿತ್ತು. ಆದರೆ ಈ ಹಿಂದೆ ದಾಂಡೇಲಿಯ ಕಾಡುಗಳಲ್ಲಿ ಕತ್ತೆಕಿರುಬವನ್ನು ಯಾರು ನೋಡಿದ ಬಗ್ಗೆ ಮಾಹಿತಿ ಇಲ್ಲ. ಇಲ್ಲಿಗೆ ಕತ್ತೆಕಿರುಬ ಹೇಗೆ ಬಂತು ಎನ್ನುವದು ಯಕ್ಷಪ್ರಶ್ನೆಯಾಗಿದೆ.
ಇದೀಗ ಬುಧವಾರ ಬೆಳಗಿನ ಜಾವ ಗಣೇಶ ಗುಡಿಯ ಸೇತುವೆ ಬಳಿ ಕತ್ತೆಕಿರುಬ ವೊಂದು ಕಾಣಿಸಿಕೊಂಡಿದ್ದು, ಸದ್ಯ ಮೊಬೈಲ್ ನಲ್ಲಿ ಸ್ಥಳೀಯರೊಬ್ಬರು ಸೆರೆಹಿಡಿದಿದ್ದಾರೆ. ಪ್ರಾಣಿ ಮತ್ತು ಮಾನವ ಸಂಘರ್ಷ ಹೆಚ್ಚಾಗಿದ್ದು, ಒಂದೆಡೆ ಹುಲಿ, ಚಿರತೆಗಳ ದರ್ಶನವಾದರೆ ಇನ್ನೊಂದಡೆ ಕತ್ತೆಕಿರುಬ ಕಾಣಿಸಿಕೊಂಡಿದೆ. ಕೊಳೆತ ಪ್ರಾಣಿ ತಿಂದು ಕಾಡು ಸ್ವಚ್ಛ ಮಾಡುವ ಈ ಪ್ರಾಣಿ ಮನುಷ್ಯನಿಗೆ ತೀರಾ ಅಪಾಯಕಾರಿಯಲ್ಲ. ಆದರೆ ಜಾಗೃತೆ ಯಿಂದಿರುವದು ಒಳಿತು. ಬರಲಿರುವ ದಿನಗಳಲ್ಲಿ ಪ್ರವಾಸಿ ಪ್ರಾಣಿಪ್ರಿಯರಿಗೆ ಅಪರೂಪದ ಕತ್ತೆಕಿರುಬಗಳ ದರ್ಶನವಾಗಲೂ ಬಹುದು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 