27ರಂದು ಈದ್ ಮಿಲನ್ ಪ್ರಯುಕ್ತ ರಸಮಂಜರಿ ಕಾರ್ಯಕ್ರಮ
Rasamanjari program for Eid Milan on 27th
ಕೊಪ್ಪಳ 22: ರಫೀ ಮೆಲೋಡಿ ಕೊಪ್ಪಳ ವತಿಯಿಂದ ಈದ್ ಮಿಲನ್ ಪ್ರಯುಕ್ತ ರಸಮಂಜರಿ ಕಾರ್ಯಕ್ರಮ ಇದೇ ದಿ, 27 ರವಿವಾರ ಸಂಜೆ 5:30 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಜರುಗಲಿದೆ.
ಸಮಾರಂಭದಲ್ಲಿ ಶಾಸಕ ಕೆ ರಾಘವೇಂದ್ರ ಹಿಟ್ನಾಳ್ ಸಂಸದ ಕೆ ರಾಜಶೇಖರ ಹಿಟ್ನಾಳ್ ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ನಗರ ಕಾಂಗ್ರೆಸ್ ಅಧ್ಯಕ್ಷ ಎಂ ಪಾಷಾ ಕಾಟನ್ ಸೈಯದ್ ಫೌಂಡೇಶನ್ ಅಧ್ಯಕ್ಷ ಕೆಎಂ ಸೈಯದ್ ಲ್ಯಾಂಡ್ ಡೆವಲಪರ್ ನಾಸಿರ್ ಹುಸೇನ್ ನಗರಸಭೆ ಮಾಜಿ ಸದಸ್ಯ ಎಂ ಪಾಷಾ ಮಾನ್ವಿ ಅಂಜುಮನ್ ಕಮಿಟಿ ಮಾಜಿ ಅಧ್ಯಕ್ಷ ಹುಸೇನ್ ಪೀರಾ ಮುಜಾವರ್ ಲ್ಯಾಂಡ್ ಡೆವಲಪರ್ ಜಾಕೀರ್ ಹುಸೇನ್ ಖಾನ್ ಕುಷ್ಟಗಿ ಹಿರಿಯ ಪತ್ರಕರ್ತ ಎಂ ಸಾಧಿಕ್ ಅಲಿ ನಿವೃತ್ತ ವೃತ್ತಿ ಶಿಕ್ಷಕ ಅಮೀರ್ ಹಮ್ಜಾ ಸಮಾಜದ ಮುಖಂಡ ವಜೀರ್ ಸಾಬ್ ದಪೇದಾರ್ ಅಲ್ಲದೆ ಸಂಘಟಕ ಸೈಯದ್ ಇಮಾಮ ಹುಸೇನ್ ಸಿಂದೋಗಿ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ.
ಸದರಿ ಈದ್ ಮಿಲನ್ ರಸಮಂಜರಿ ಕಾರ್ಯಕ್ರಮದಲ್ಲಿ ಕೊಪ್ಪಳದ ಗಾಯಕರಾದ ಮೊಹಮ್ಮದ್ ರಫಿ, ಭಾಷಾ ಹಿರೇಮನಿ ಕಿನ್ನಾಳ ಮತ್ತು ದಾವುದ್ ಹುನಗುಂದ್ ಸೇರಿದಂತೆ ಮಹಿಳಾ ಗಾಯಕಿಯರು ಹಾಸ್ಯ ಕಲಾವಿದರು ಪಾಲ್ಗೊಂಡು ತಮ್ಮ ಗಾಯನದ ಮೂಲಕ ಜನಮನ ರಂಜಿಸಲಿದ್ದಾರೆ ಎಂದು ರಫಿ ಮೆಲೋಡಿಸ್ ಕೊಪ್ಪಳದ ಸಮಸ್ತ ಕಲಾವಿದರು ಪ್ರಕಟಣೆ ಮೂಲಕ ತಿಳಿಸಿ ಸರ್ವರನ್ನು ಸ್ವಾಗತಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 