ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥಸಂಚಲನ
Rashtriya Swayamsevak Sangh procession
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥಸಂಚಲನ
ರಾಯಬಾಗ 11: ರಾಷ್ಟ್ರೀಯ ಸ್ವಯಂ ಸೇವಕ ಸಂಘವು ದೇಶದ ಪ್ರತಿಯೊಬ್ಬ ಭಾರತೀಯನಲ್ಲಿ ರಾಷ್ಟ್ರಾಭಿಮಾನ ಬೆಳಸುವ ಸಂಘಟನೆಯೆಂದು ಎಂದು ಚಿಕ್ಕೋಡಿ ಜಿಲ್ಲಾ ಆರ್.ಎಸ್.ಎಸ್ ಸಂಚಾಲಕ ಸಂಜಯ ಅಡಿಕೆ ಹೇಳಿದರು.
ಶನಿವಾರ ಸಾಯಂಕಾಲ ಪಟ್ಟಣದ ಮಹಾವೀರ ಆಂಗ್ಲ ಮಾಧ್ಯಮ ಶಾಲೆ ಆವರಣದಲ್ಲಿ ಆರ್.ಎಸ್.ಎಸ್. ದಿಂದ ಹಮ್ಮಿಕೊಂಡಿದ್ದ ವಿಜಯ ದಶಮಿ ಉತ್ಸವ ಹಾಗೂ ಆರ್.ಎಸ್.ಎಸ್ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಆರ್.ಎಸ್.ಎಸ್ ರಾಷ್ಟ್ರದ ನಾಗರಿಕರಲ್ಲಿ ರಾಷ್ಟ್ರೀಯ ಮನೋಭಾವ ಬೆಳೆಸುವ ಮತ್ತು ಶಿಸ್ತಿನ ಸಂಘವಾಗಿದೆ ಎಂದರು. ಪಟ್ಟಣದ ಪ್ರಮುಖ ರಸ್ತೆ ಮತ್ತು ಬೀದಿಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಗಣಧಾರಿಗಳ ಶಿಸ್ತಿನ ಪಥ ಸಂಚಲನ ನಡೆಯಿತು.
ಪಥ ಸಂಚಲನದಲ್ಲಿ ಶಾಸಕ ಡಿ.ಎಮ್.ಐಹೊಳೆ, ವಿಧಾನ ಪರಿಷತ್ತ ಮಾಜಿ ಸದಸ್ಯ ವಿವೇಕರಾವ ಪಾಟೀಲ, ಮಾಜಿ ಶಾಸಕ ಪಿ.ರಾಜೀವ, ಭರತೇಶ ಬನವಣೆ, ಸದಾಶಿವ ದೇಶಿಂಗೆ, ವೆಂಕಟೇಶ ದೇಶಪಾಂಡೆ, ಅಣ್ಣಾಸಾಹೇಬ ಕುಲಗುಡೆ, ಸದಾನಂದ ಹಳಿಂಗಳಿ, ಪ್ರಭಾಕರ ಪುರಾಣಿಕ, ಅಶೋಕ ಅಂಗಡಿ, ಪೃಥ್ವಿರಾಜ ಜಾಧವ, ಸತ್ಯಕುಮಾರ ಬಿರಾಜ ಸೇರಿ ಅನೇಕರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 