ಮದಲಗಟ್ಟಿ ಆಂಜನೇಯ ಸ್ವಾಮಿಯ ರಥೋತ್ಸವ
Rathotsava of Madalagatti Anjaneya Swami
ಮದಲಗಟ್ಟಿ ಆಂಜನೇಯ ಸ್ವಾಮಿಯ ರಥೋತ್ಸವ
ಹೂವಿನ ಹಡಗಲಿ 16: ತಾಲೂಕಿನ ಮೊದಲಘಟ್ಟ ಆಂಜನೇಯಸ್ವಾಮಿ ರಥೋತ್ಸವ ಭಾನುವಾರ ಸಂಜೆ ಸಾವಿರಕ್ಕೂ ಅಧಿಕ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು.ಇದಕ್ಕೂ ಮೊದಲು ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿರಿಸಿ ತಂದು, ರಥಕ್ಕೆ ಪ್ರದಕ್ಷಣೆ ಹಾಕಿಸಿ, ನಂತರ ರಥದಲ್ಲಿ ಸ್ವಾಮಿಯ ಮೂರ್ತಿ ಇರಿಸಲಾಯಿತು. ಪಟಾಕ್ಷಿ ಹರಾಜು ನಂತರ ರಥೋತ್ಸವ ನಡೆಯಿತು. ಸಾಗುತ್ತಿರುವ ರಥಕ್ಕೆ ಭಕ್ತರು ಬಾಳೆಹಣ್ಣು- ಉತ್ತತ್ತಿ ಸಮರ್ಿಸಿದರು. ತಾಲೂಕು ಸೇರಿ ಮುಂಡರಗಿ, ಗದಗ, ಕೊಪ್ಪಳ. ಶಿರಹಟ್ಟಿ ಮುಂತಾದ ತಾಲೂಕಿನ ಭಕ್ತರು ಪಾಲ್ಗೊಂಡಿದ್ದರು. ಅನೇಕ ಭಕ್ತರು ಹರಕೆ ತೀರಿಸಿದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಿಗಿಬಂದೋಬಸ್ತ್ ಒದಗಿಸಲಾಗಿತ್ತು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 