ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಪ್ರಕರಣಕ್ಕೆ ರವಿಕುಮಾರ್ ಖಂಡನೆ
Ravikumar condemns shoe-throwing incident at judges
ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಪ್ರಕರಣಕ್ಕೆ ರವಿಕುಮಾರ್ ಖಂಡನೆ
ಕೊಪ್ಪಳ 10: ಮುಖ್ಯ ನ್ಯಾಯಮೂರ್ತಿ ಗವಾಯಿ ಯವರ ಮೇಲೆ ರಾಕೇಶ್ ಕಿಶೋರ್ ಎಂಬುವರು ಮಾಡಿರುವ ಶೂ ಎಸೆತ ಪ್ರಕರಣವನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಕೊಪ್ಪಳ ತಾಲೂಕ ಸಂಚಾಲಕ ರವಿಕುಮಾರ್ ಲಿಂಗದ ಹಳ್ಳಿ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಅವರು ನಿನ್ನೆ ಸಮಿತಿಯ ಪದಾಧಿಕಾರಿಗಳೊಂದಿಗೆ ಜಿಲ್ಲಾ ಆಡಳಿತದ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಪ್ರಕರಣದ ಪ್ರಮುಖ ಆರೋಪಿ ರಾಕೇಶ್ ಕಿಶೋರ್ ವಿರುದ್ಧ ದೂರು ಸಲ್ಲಿಸಿ ಕೂಡಲೇ ಆರೋಪಿಗಳನ್ನು ಬಂಧಿಸಿ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಕೊಪ್ಪಳ ತಾಲೂಕ ಸಂಚಾಲಕ ರವಿಕುಮಾರ್ ಲಿಂಗದಹಳ್ಳಿ ರವರು ಸರ್ಕಾರಕ್ಕೆ ಮತ್ತು ರಾಷ್ಟ್ರಪತಿಯವರಿಗೆ ಸಮಿತಿಯ ಪರವಾಗಿ ಜಿಲ್ಲಾಧಿಕಾರಿಗಳ ಮೂಲಕ ದೂರು ಪತ್ರ ಸಲ್ಲಿಸಿದ ಬಳಿಕ ಮನವಿ ಮಾಡಿಕೊಂಡು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಅವರೊಂದಿಗೆ ಸಮಿತಿಯ ಪದಾಧಿಕಾರಿಗಳಾದ ಜಿಲ್ಲಾ ಸಂಚಾಲಕ ದುರ್ಗಪ್ಪ ದೊಡ್ಡಮನಿ ಜಿಲ್ಲಾ ಸಂಘಟನಾ ಸಂಚಾಲಕ ಫಕೀರ್ಪ ದೊಡ್ಡಮನಿ ವಿಭಾಗಿಯ ಸಂಚಾಲಕ ಭಾಷಾ ಸಾಬ್ ಮುಜಾವರ್, ಗಂಗಾವತಿ ಜಿಲ್ಲಾ ಖಜಾಂಚಿ ಹನುಮಂತಪ್ಪ ಹಿರೇಕಾಸನಖಂಡಿ ಕನಕಗಿರಿ ತಾಲೂಕ ಸಂಚಾಲಕ ವೆಂಕಟೇಶ್ ಪೂಜಾರ ಕೊಪ್ಪಳ ತಾಲೂಕ ವಿಭಾಗೀಯ ಸಂಚಾಲಕ ಚಿನ್ನಪ್ಪ ಬಸಾಪುರ ಕಾರಟಗಿಯ ವಿಜಯಕುಮಾರ್ ಕನಕಗಿರಿಯ ಮಾರುತಿ ದೊಡ್ಡಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದು ಸರ್ಕಾರಕ್ಕೆ ಒತ್ತಾಯಿಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 