ರಾಯಬಾಗ: ಪಟ್ಟಣದ ಶಾಸಕರ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ
Rayabagh: Press conference at the town MLA's home office
ರಾಯಬಾಗ 01: ಚಿಕ್ಕೋಡಿ ಕೇಶವ ಕಲಾ ಭವನದಲ್ಲಿ ಎ.3 ರಿಂದ 5 ರವರೆಗೆ ನಡೆಯಲಿರುವ ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದಲ್ಲಿ ಬಿಜೆಪಿ ಪಕ್ಷದ ರಾಯಬಾಗ ಮಂಡಲದ ಪದಾಧಿಕಾರಿಗಳು, ಬಿ.ಎಲ್.ಒಗಳು, ಕಾರ್ಯಕರ್ತರು, ಮಹಿಳಾ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಯುವ ಧುರೀಣ ಅರುಣ ಐಹೊಳೆ ಹೇಳಿದರು.ಬುಧವಾರ ಪಟ್ಟಣದ ಶಾಸಕರ ಗೃಹ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶಿಕ್ಷಣ ಅಭಿಯಾನದಲ್ಲಿ ಬಿಜೆಪಿ ಪಕ್ಷ ನಡೆದು ಬಂದ ದಾರಿ, ಪಕ್ಷ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು, ಪ್ರಧಾನಿ ನರೇಂದ್ರ ಮೋದಿಯವರು ಹಾಕಿಕೊಟ್ಟ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿಸಿದರು.ಈ ಪ್ರಶಿಕ್ಷಣ ಅಭಿಯಾನದಲ್ಲಿ ಹಿರಿಯ ರಾಜಕಾರಣಿಗಳಾದ ರಮೇಶ ಕತ್ತಿ, ಅಣ್ಣಾಸಾಹೇಬ ಜೊಲ್ಲೆ, ಶಾಸಕ ಡಿ.ಎಮ್.ಐಹೊಳೆ, ಸಂಜಯ ಪಾಟೀಲ ಸೇರಿ ಅನೇಕ ಹಿರಿಯ ಧುರೀಣಿಯರು ಪಾಲ್ಗೊಳ್ಳಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಾಗವಹಿ ಅಭಿಯಾನ ಯಶಸ್ಸುಗೊಳಿಸಬೇಕೆಂದು ಕರೆ ನೀಡಿದರು.ಸುದ್ದಿಗೋಷ್ಠಿಯಲ್ಲಿ ರಾಯಬಾಗ ಮಂಡಲ ಅಧ್ಯಕ್ಷ ಪೃಥ್ವಿರಾಜ ಜಾಧವ, ಸದಾಶಿವ ಘೋರೆ್ಡ, ಸದಾನಂದ ಹಳಿಂಗಳಿ, ಮಹೇಶ ಕರಮಡಿ, ಮಾರುತಿ ಬಂತೆ, ಅನೀಲ ಕೊರವಿ ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 