ರೆಬೆಲ್ ಸ್ಟಾರ್ ಅಂಬರೀಶ್ ಜನ್ಮದಿನ: ಮುಖ್ಯಮಂತ್ರಿ, ಗಣ್ಯರಿಂದ ಗೌರವ ನಮನ
ಬೆಂಗಳೂರು, ಮೇ 29, ಮಾಜಿ ಸಚಿವ, ಜನಪ್ರಿಯ ಕಲಾವಿದ, ರೆಬೆಲ್ ಸ್ಟಾರ್ ಅಂಬರೀಶ್ ಅವರ ಜನ್ಮದಿನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿ, ಮಾಜಿ ಸಚಿವ, ಜನಪ್ರಿಯ ಕಲಾವಿದ ಮತ್ತು ನನ್ನ ಆತ್ಮೀಯರಾಗಿದ್ದ ಅಂಬರೀಶ್ ಅವರ ಜನ್ಮದಿನದಂದು ಅವರನ್ನು ಸ್ಮರಿಸೋಣ. ಅವರ ನೆನಪು, ಅವರ ವ್ಯಕ್ತಿತ್ವ, ಅವರು ಮಾಡಿದ್ದ ಪಾತ್ರಗಳ ಮೂಲಕ ಅಂಬರೀಶ್ ಎಲ್ಲರ ಮನದಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವಿಟ್ ಮಾಡಿ, ಇವತ್ತು ನಾಡು ಕಂಡ ಅಪರೂಪದ ಜನಾನುರಾಗಿ ಕಲಾವಿದ, ರೆಬೆಲ್ ಸ್ಟಾರ್ ಅಂಬರೀಶ್ ಅವರ ಜನ್ಮದಿನ. ಚಿತ್ರರಂಗ ಮತ್ತು ರಾಜಕೀಯದಲ್ಲಿ ತಮ್ಮದೇ ವಿಶಿಷ್ಟ ಛಾಪು ಮೂಡಿಸಿದ್ದ ಅಂಬರೀಶ್ ಕನ್ನಡಿಗರ ಪಾಲಿಗೆ ಎಂದಿಗೂ ಲೆಜೆಂಡ್ ಆಗಿಯೇ ಉಳಿದಿದ್ದಾರೆ. ಅವರ ನೆನಪುಗಳ ಜೊತೆಗೆ ಎಲ್ಲ ಅಭಿಮಾನಿಗಳಿಗೂ ಅಂಬರೀಶ್ 68ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ.ಆರೋಗ್ಯ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿ, ಮಂಡ್ಯದ ಗಂಡು, ಹಿರಿಯ ರಾಜಕಾರಣಿ, ಮಾಜಿ ಕೇಂದ್ರ ಹಾಗೂ ರಾಜ್ಯ ಸಚಿವ, ಅಭಿಮಾನಿಗಳ ಪ್ರೀತಿಯ ರೆಬೆಲ್ ಸ್ಟಾರ್, ದಿವಂಗತ ಅಂಬರೀಷ್ ಅವರ ಜನ್ಮದಿನದಂದು, ಕನ್ನಡ ಸಿನಿಮಾ ಲೋಕಕ್ಕೆ ಅವರು ಕೊಟ್ಟ ಕಲಾಸೇವೆಗೆ ಅನಂತ ನಮನಗಳು ಎಂದು ಸ್ಮರಿಸಿದ್ದಾರೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 