ವೃದ್ಧಾಶ್ರಮಗಳು ಕಡಿಮೆಯಾಗಲಿ: ಪ್ರೊ.ಉದಯಸಿಂಗ ರಜಪೂತ
Reduce the number of old age homes: Prof. Udayasingh Rajput
ಬೆಳಗಾವಿ 27: ಸಮಾಜದಲ್ಲಿ ವೃದ್ಧಾಶ್ರಮಗಳು ಕಡಿಮೆಯಾಗಬೇಕು. ಕುಟುಂಬ ಸದಸ್ಯರು ವೃದ್ಧ ತಂದೆತಾಯಿಗಳನ್ನು ವೃದ್ಧಾಶ್ರಮಗಳಿಗೆ ಕಳುಹಿಸದೆ ಮನೆಯಲ್ಲಿಯೇ ಅವರ ಆರೈಕೆ ಮಾಡಬೇಕು. ಅವರ ಸೇವೆಯೇ ಭಗವಂತನ ಸೇವೆ ಎಂದರಿತಾಗ ಮಾತ್ರ ತಂದೆ ತಾಯಿಯ ಋಣ ತೀರಿಸಬಹುದಾಗಿದೆ. ಅವರಿಂದ ಪಡೆದ ನಮ್ಮ ಜನ್ಮ ಸಾರ್ಥಕವಾಗುವದು ಅಂತಾ ರೋಟರಿ ಕ್ಲಬ್ ಬೆಳಗಾವಿ ಮಿಡ್ ಟೌನ್ ಅದ್ಯಕ್ಷ ಪ್ರೊ.ಉದಯಸಿಂಗ ರಜಪೂತ ಹೇಳಿದರು.
ಬಸವನಕುಡಚಿಯಲ್ಲಿರುವ ನಾಗನೂರ ಶಿವಬಸವ ಟ್ರಸ್ಟಿನ ಚಿನ್ನಮ್ಮ ಹಿರೆಮಠ ವೃದ್ಧಾಶ್ರಮಕ್ಕೆ ರೋಟರಿ ಕ್ಲಬ್ ಬೆಳಗಾವಿ ಮಿಡ್ ಟೌನ್ ವತಿಯಿಂದ ಸುಮಾರು 50,000 ರೂಪಾಯಿ ಮೌಲ್ಯದ ದಿನನಿತ್ಯದ ಅವಶ್ಯಕ ವಸ್ತುಗಳನ್ನು ನೀಡಿದರು.
ರೊ.ಅಶೋಕ ಮಳಗಲಿ ಅವರು ಹಾಸ್ಯ ಕಾರ್ಯಕ್ರಮ ನೀಡಿ ರಂಜಿಸಿದರು. ನಂದನ ಬಾಗಿ, ರಾಜೀವ ದೇಶಪಾಂಡೆ, ರೂಪಾ ದೇಶಪಾಂಡೆ, ಅನಿಲ ಬಾಗಿ, ಅಶೋಕ ಬದಾಮಿ, ರಾಮ ಸಾಂಗಲೆ, ಸತೀಶ ಮಿಠಾರೆ, ಸತೀಶ ನಾಯಿಕ, ಡಾ.ವಿಜಯ ಪೂಜಾರ, ಪ್ರೊ.ಕೊಲ್ಹಾಪುರೆ, ಮಹಿಳಾ ಸಾಂತ್ವನ ಕೇಂದ್ರದ ಮಧು, ಆಶ್ರಮದ ಆಡಳಿತಾಧಿಕಾರಿ ಚೌಗಲಾ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 