ಪ್ರಾದೇಶಿಕ ಆಯುಕ್ತರಾದ ಪಿ.ಎ. ಮೇಘಣ್ಣವರ ಅವರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ
ಬೆಳಗಾವಿ 31: ತಮ್ಮ ನಿವೃತ್ತಿಯ ನಂತರವೂ ಗಡಿ ಭಾಗದ ಜನತೆಯ ಸಮಸ್ಯೆಗಳಿಗೆ ಸ್ಪಂದಿಸುವದಾಗಿ ಪ್ರಾದೇಶಿಕ ಆಯುಕ್ತ ಪಿ.ಎ.ಮೇಘಣ್ಣವರ ಅವರು ಇಂದಿಲ್ಲಿ ಹೇಳಿದರು.
ಮೂವತ್ತು ವರ್ಷಗಳ ಸುದೀರ್ಘ ಸೇವೆಯ ನಂತರ ಇಂದು ನಿವೃತ್ತಿ ಹೊಂದುತ್ತಿರುವ ಅವರು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಮತ್ತು ಇತರ ಜನಪರ ಸಂಘಟನೆಗಳ ಸನ್ಮಾನವನ್ನು ಸ್ವೀಕರಿಸಿ ತಮ್ಮ ಕಚೇರಿಯ ಸಭಾಂಗಣದಲ್ಲಿ ಮಾತನಾಡಿದ ಅವರು,ತಾವು ತೊಂಭತ್ತರ ದಶಕದ ಕೊನೆಗೆ ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಕೆಲಸ ಮಾಡುವಾಗಿನ ಅನುಭವಗಳನ್ನು ಸ್ಮರಿಸಿಕೊಂಡರಲ್ಲದೇ ಪಾಲಿಕೆಯಲ್ಲಿ ಕನ್ನಡ ಅನುಷ್ಠಾನ ಮಾಡಿದ ರೀತಿಯನ್ನು ವಿವರಿಸಿದರು.
ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಅವರು ಮಾತನಾಡಿ, 1983 ರಿಂದ ಇಲ್ಲಿಯವರೆಗೆ ತಾವು ಮೇಘಣ್ಣವರ ಅವರೊಂದಿಗೆ ಹೊಂದಿದ ಒಡನಾಟ ಮತ್ತು ಅವರು ಗಡಿ ಭಾಗದಲ್ಲಿ ಮಾಡಿದ ಕನ್ನಡ ಸೇವೆಯನ್ನು ಸ್ಮರಿಸಿಕೊಂಡರು.
ಕನರ್ಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಮಹಾದೇವ ತಳವಾರ,ದಲಿತ ನಾಯಕ ಮಲ್ಲೇಶ ಚೌಗುಲೆ ಮಾತನಾಡಿ ಮೇಘಣ್ಣವರ ಅವರ ಸೇವೆಯನ್ನು ಕೊಂಡಾಡಿದರು.
ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆ ಮತ್ತು ನೃಪತುಂಗ ಯುವಕ ಸಂಘದ ವತಿಯಿಂದಲೂ ಮೇಘಣ್ಣವರ ದಂಪತಿಗಳನ್ನು ಸನ್ಮಾನಿಸಲಾಯಿತು.
ಸಂಘದ ಅಧ್ಯಕ್ಷ ಸಾಗರ್ ಬೋರಗಲ್ಲ ಮತ್ತಿತರರು ಸನ್ಮಾನಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 