ನಿತ್ಯ ಯೋಗದಿಂದ ಮಾನಸಿಕ ಸಾಮರ್ಥ್ಯ ವೃದ್ಧಿ: ಕುಲಕರ್ಣಿ
Regular yoga improves mental capacity: Kulkarni
ಸಿಂದಗಿ 22: ಪ್ರತಿನಿತ್ಯ ಯೋಗಾಸನ ಮಾಡುವುದರಿಂದ ಮಾನಸಿಕ ಸಾಮರ್ಥ್ಯ ವೃದ್ಧಿಸುತ್ತದೆ. ಮತ್ತು ಕಲಿಕೆಯಲ್ಲಿ ಆಸಕ್ತಿ ಮೂಡುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಹೇಳಿದರು.
ಸಿಂದಗಿ ಪಟ್ಟಣದ ಸಮರ್ಥ ವಿದ್ಯಾವಿಕಾಸ ಸಂಸ್ಥೆಯ ಪ್ರೇರಣಾ ಶಿಶುನಿಕೇತನ, ವಿದ್ಯಾನಿಕೇತನ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೇರಣಾ ಆಂಗ್ಲಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪರಿಣಿತರ ಮಾರ್ಗದರ್ಶನದಲ್ಲಿ ನಿತ್ಯವೂ ಯೋಗಾಸನ ಮಾಡುವುದರಿಂದ ಮನಸ್ಸು ಮತ್ತು ದೇಹದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಸಂಸ್ಥೆಯ ನಿರ್ದೇಶಕ ಪಿ.ಡಿ.ಕುಲಕರ್ಣಿ, ಮುಖ್ಯಗುರುಮಾತೆ ಎಮ್.ಪಿ.ಬುಕ್ಕಾ, ಪ್ರೌಢಶಾಲಾ ಮುಖ್ಯಗುರುಮಾತೆ ಎಸ್.ಆಯ್.ಅಸ್ಕಿ, ಸಹಶಿಕ್ಷಕಿ ಎಮ್.ಜಿ.ಧ್ಯಾಮಗೊಂಡ ಮಾತನಾಡಿದರು. ಮಕ್ಕಳಿಗೆ ಸೂರ್ಯ ನಮಸ್ಕಾರ, ವೃಕ್ಷಾಸನ, ತಾಡಾಸನ, ತ್ರಿಕೋನಾಸನ, ಬಾಲಾಸನ, ಪಾರ್ಶ್ವ ಕೋನಾಸನ, ಅನುಲೋಮ, ವಿಲೋಮದ ಆಸನಗಳನ್ನು ಮಾಡಿ ಮಕ್ಕಳು ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ಯೋಗ ತರಬೇತಿಯನ್ನು ಸಹಶಿಕ್ಷಕಿ ಸುಜಾತಾ ನಾಯಕ ಅವರ ನೇತೃತ್ವದ ತಂಡದಲ್ಲಿ 4ನೇ ತರಗತಿ ವಿದ್ಯಾರ್ಥಿಗಳಾದ ಶ್ರೀಗೌರಿ ಬಿರಾದಾರ, ಶಶಾಂಕ ಡಂಬಳ, ವೈಷ್ಣವಿ ರಾಠೋಡ, ಸಿದ್ದಾರ್ಥ ನಿಂಬರಗಿ ಯೋಗ ಪಟುಗಳ ತಂಡ ತರಬೇತಿ ನೀಡಿತು.
ಸತೀಶ ಕುಲಕರ್ಣಿ, ಕಿರಣ ಕುಲಕರ್ಣಿ, ಅಲ್ತಾಪ ತಾಂಬೋಳಿ, ಅಕ್ಷಯ ಯಲಗಟ್ಟಿ, ಶ್ರೀಕಾಂತ ಹೂನಳ್ಳಿ, ಯಲ್ಲಾಲಿಂಗ ಹೊಸೂರ, ಎಸ್.ಬಿ.ಕುಂಟೋಜಿ, ಎಮ್.ಎಮ್.ಜೂಮನಾಳ, ಬಿ.ಎಸ್. ಪಾಟೀಲ, ಎಸ್ವ್ಹಿ. ಕಡಣಿ, ವಿ.ಎ.ನಾಯಕ, ಎಸ್.ಡಿ. ನಾಯಕ, ವಿಜಯಲಕ್ಷ್ಮೀ ಅಲಾಳಮಠ, ಎನ್.ಜಿ. ಬಳಗಾನೂರ, ವಿ.ಕೆ. ಚವ್ಹಾಣ, ಆರ್.ಎಮ್.ಫಕೀರಪುರ, ಆರ್.ಎಸ್.ಶಿವಸಿಂಪಿಗೇರ, ಎಸ್.ಎಸ್.ಪಾಟೀಲ, ಲಕ್ಷ್ಮೀ ಸೇರದಂತೆ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 