ನಿತ್ಯ ಯೋಗದಿಂದ ಮಾನಸಿಕ ಸಾಮರ್ಥ್ಯ ವೃದ್ಧಿ: ಕುಲಕರ್ಣಿ
Regular yoga improves mental capacity: Kulkarni
ಸಿಂದಗಿ 22: ಪ್ರತಿನಿತ್ಯ ಯೋಗಾಸನ ಮಾಡುವುದರಿಂದ ಮಾನಸಿಕ ಸಾಮರ್ಥ್ಯ ವೃದ್ಧಿಸುತ್ತದೆ. ಮತ್ತು ಕಲಿಕೆಯಲ್ಲಿ ಆಸಕ್ತಿ ಮೂಡುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಹೇಳಿದರು.
ಸಿಂದಗಿ ಪಟ್ಟಣದ ಸಮರ್ಥ ವಿದ್ಯಾವಿಕಾಸ ಸಂಸ್ಥೆಯ ಪ್ರೇರಣಾ ಶಿಶುನಿಕೇತನ, ವಿದ್ಯಾನಿಕೇತನ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೇರಣಾ ಆಂಗ್ಲಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪರಿಣಿತರ ಮಾರ್ಗದರ್ಶನದಲ್ಲಿ ನಿತ್ಯವೂ ಯೋಗಾಸನ ಮಾಡುವುದರಿಂದ ಮನಸ್ಸು ಮತ್ತು ದೇಹದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಸಂಸ್ಥೆಯ ನಿರ್ದೇಶಕ ಪಿ.ಡಿ.ಕುಲಕರ್ಣಿ, ಮುಖ್ಯಗುರುಮಾತೆ ಎಮ್.ಪಿ.ಬುಕ್ಕಾ, ಪ್ರೌಢಶಾಲಾ ಮುಖ್ಯಗುರುಮಾತೆ ಎಸ್.ಆಯ್.ಅಸ್ಕಿ, ಸಹಶಿಕ್ಷಕಿ ಎಮ್.ಜಿ.ಧ್ಯಾಮಗೊಂಡ ಮಾತನಾಡಿದರು. ಮಕ್ಕಳಿಗೆ ಸೂರ್ಯ ನಮಸ್ಕಾರ, ವೃಕ್ಷಾಸನ, ತಾಡಾಸನ, ತ್ರಿಕೋನಾಸನ, ಬಾಲಾಸನ, ಪಾರ್ಶ್ವ ಕೋನಾಸನ, ಅನುಲೋಮ, ವಿಲೋಮದ ಆಸನಗಳನ್ನು ಮಾಡಿ ಮಕ್ಕಳು ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ಯೋಗ ತರಬೇತಿಯನ್ನು ಸಹಶಿಕ್ಷಕಿ ಸುಜಾತಾ ನಾಯಕ ಅವರ ನೇತೃತ್ವದ ತಂಡದಲ್ಲಿ 4ನೇ ತರಗತಿ ವಿದ್ಯಾರ್ಥಿಗಳಾದ ಶ್ರೀಗೌರಿ ಬಿರಾದಾರ, ಶಶಾಂಕ ಡಂಬಳ, ವೈಷ್ಣವಿ ರಾಠೋಡ, ಸಿದ್ದಾರ್ಥ ನಿಂಬರಗಿ ಯೋಗ ಪಟುಗಳ ತಂಡ ತರಬೇತಿ ನೀಡಿತು.
ಸತೀಶ ಕುಲಕರ್ಣಿ, ಕಿರಣ ಕುಲಕರ್ಣಿ, ಅಲ್ತಾಪ ತಾಂಬೋಳಿ, ಅಕ್ಷಯ ಯಲಗಟ್ಟಿ, ಶ್ರೀಕಾಂತ ಹೂನಳ್ಳಿ, ಯಲ್ಲಾಲಿಂಗ ಹೊಸೂರ, ಎಸ್.ಬಿ.ಕುಂಟೋಜಿ, ಎಮ್.ಎಮ್.ಜೂಮನಾಳ, ಬಿ.ಎಸ್. ಪಾಟೀಲ, ಎಸ್ವ್ಹಿ. ಕಡಣಿ, ವಿ.ಎ.ನಾಯಕ, ಎಸ್.ಡಿ. ನಾಯಕ, ವಿಜಯಲಕ್ಷ್ಮೀ ಅಲಾಳಮಠ, ಎನ್.ಜಿ. ಬಳಗಾನೂರ, ವಿ.ಕೆ. ಚವ್ಹಾಣ, ಆರ್.ಎಮ್.ಫಕೀರಪುರ, ಆರ್.ಎಸ್.ಶಿವಸಿಂಪಿಗೇರ, ಎಸ್.ಎಸ್.ಪಾಟೀಲ, ಲಕ್ಷ್ಮೀ ಸೇರದಂತೆ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 