ಕಾರಹುಣ್ಣಿಮೆ ಅಂಗವಾಗಿ ಹುಲಿಗೆಮ್ಮ ಸನ್ನಿಧಾನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು
Religious programs at Huligemma Sannidhana on the occasion of Karahunnime
ಕಂಪ್ಲಿ 11: ಪಟ್ಟಣದ 22ನೇ ವಾರ್ಡಿನ ವಾಲ್ಮೀಕಿ ನಗರದಲ್ಲಿರುವ ಭಕ್ತರ ಆರಾಧ್ಯ ದೇವತೆ ಶ್ರೀ ಹುಲಿಗೆಮ್ಮ ದೇವಸ್ಥಾನದಲ್ಲಿ ಕಾರಹುಣ್ಣಿಮೆ ಅಂಗವಾಗಿ ಹೋಮ ಹವನ ಸೇರಿದಂತೆ ನಾನಾ ಧಾರ್ಮಿಕ ಕೈಂಕಾರ್ಯಗಳು ಶ್ರದ್ಧಾಭಕ್ತಿಯಿಂದ ಬುಧವಾರ ಜರುಗಿದವು.
ಇಲ್ಲಿನ ದೇವಸ್ಥಾನದ ಸನ್ನಿಧಾನದಲ್ಲಿ ಪೂಜಾರಿಗಳಾದ ಎರೆ್ರಮ್ಮ, ರಾಮಾಂಜಿನೆಮ್ಮ ಇವರ ನೇತೃತ್ವದಲ್ಲಿ ಹುಲಿಗೆಮ್ಮ ದೇವಿಗೆ ಎಲೆಚೆಟ್ಟು ಏರಿಸಿರುವುದು, ಹೂವಿನ ಅಲಂಕಾರ, ಮಹಾಮಂಗಳಾರತಿ, ಜೋಗ್ ಪಂಥಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶಾಸ್ತ್ರೋಸ್ರವಾಗಿ ನೆರವೇರಿದವು.
ಸಾಕಷ್ಟು ಭಕ್ತರು ದೇವಿ ಸನ್ನಿಧಾನಕ್ಕೆ ಭೇಟಿ ನೀಡಿ, ಕಾಯಿ, ಕರ್ೂರ ಅರ್ಿಸಿ, ದರ್ಶನ ಪಡೆದರು. ನಂತರ ಅನ್ನಸಂತಾರೆ್ಣ ಜರುಗಿತು. ಮಂಗಳವಾರದಂದು ಕಂಪ್ಲಿ-ಕೋಟೆಯಿಂದ ವಾಲ್ಮೀಕಿ ನಗರದ ದೇವಸ್ಥಾನದವರೆಗೆ ದೇವಿಯ ಕುಂಭಾ ಮೆರವಣಿಗೆ ನಡೆಸಲಾಯಿತು.
ಈ ಮೆರವಣಿಗೆಯಲ್ಲಿ ಸುಮಂಗಲಿಯರ ಕಳಸ ಹಾಗೂ ಮಂಗಳವಾದ್ಯ ಪಾಲ್ಗೊಂಡಿದ್ದವು. ರಾತ್ರಿ ಭಜನೆ ಜರುಗಿತು.
ಈ ಸಂದರ್ಭದಲ್ಲಿ ಮುಖಂಡರಾದ ದೊಡ್ಡ ಹೊನ್ನೂರಸ್ವಾಮಿ, ಗೋವಿಂದ, ಅಂಜಿನಿ, ಈ.ಹೊನ್ನೂರಸ್ವಾಮಿ, ಓಬಳೇಶ, ಶೀನಪ್ಪ, ರಾಮಾಂಜಿನಿ, ಪಿ.ವಿರೇಶ ಸೇರಿದಂತೆ ವಾಲ್ಮೀಕಿ ನಗರ ಹಾಗೂ ಸುತ್ತಮುತ್ತಲಿನ ಭಕ್ತರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 