ಬಂಡಿಪುರ ಹುಲಿ ಸಫಾರಿ ಮೇಲುಕಾಮನಹಳ್ಳಿಗೆ ಸ್ಥಳಾಂತರ
ಬಂಡಿಪುರ, ಆ 5 ದೇಶದ ಹುಲಿ ವಾಸ ಸ್ಥಾನಗಳ ರಕ್ಷಣೆಗೆ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ವಿಶೇಷ ಗಮನಹರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಸುಪ್ರಸಿದ್ಧ ಚಾಮರಾಜನಗರ ಜಿಲ್ಲೆಯ ಬಂಡಿಪುರ ಹುಲಿ ಸಫಾರಿ ಕೇಂದ್ರವನ್ನು ಸ್ಥಳಾಂತರಿಸಲಾಗಿದೆ.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿಕುಮಾರ್ ಈ ಕುರಿತು ಮಾಹಿತಿ ನೀಡಿದ್ದು, ಬಂಡಿಪುರ ಹುಲಿ ಸಂರಕ್ಷಿತ ಅಭಯಾರಣ್ಯದಿಂದ 10 ಕಿಲೋ ಮೀಟರ್ ದೂರದ ಮೇಲುಕಾಮನಹಳ್ಳಿಗೆ ಹುಲಿ ಸಫಾರಿಯನ್ನು ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.
ಹುಲಿ ಸಫಾರಿಗೆ ಆಗಮಿಸುವ ಪ್ರವಾಸಿಗರು, ವನ್ಯಜೀವಿ ಪ್ರಿಯರು ಇನ್ನು ಮುಂದೆ ಮೇಲುಕಾಮನಹಳ್ಳಿಗೆ ಆಗಮಿಸಬೇಕು. ಅಲ್ಲಿಂದಲೇ ಕಾಡಿನ ಸೌಂದರ್ಯ ಹಾಗೂ ವನ್ಯಜೀವಿಗಳ ವೀಕ್ಷಣೆಗೆ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದರು.
ಈಗಿರುವ ಬಂಡಿಪುರ ಸಫಾರಿ ಕೇಂದ್ರ ಪ್ರದೇಶದಲ್ಲಿ ಜಿಂಕೆ, ಕಾಡೆಮ್ಮೆಗಳ ಹಿಂಡು, ಕಾಡಾನೆ, ಚಿರತೆ, ಹುಲಿ, ಸೇರಿ ಅನೇಕ ಬಗೆಯ ವನ್ಯಜೀವಿಗಳು ಮುಕ್ತವಾಗಿ ಸಂಚರಿಸುತ್ತಿವೆ. ಇವುಗಳ ಮುಕ್ತ ಸಂಚಾರಕ್ಕೆ ತೊಂದರೆಯಾಗಬಾರದು ಎನ್ನುವ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರವಿಕುಮಾರ್ ಹೇಳಿದರು.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 