ಗಾಯರಾಣ ಜಮೀನದಲ್ಲಿ ನಿರ್ಮಿಸಿದ ಅನಧಿಕೃತ ಕಟ್ಟಡಗಳ ತೆರವು
Removal of unauthorized buildings constructed on Gayarana land
ರಾಯಬಾಗ 29: ತಾಲೂಕಿನ ಮೇಖಳಿ ಗ್ರಾಮದ ಸರ್ಕಾರಿ ಗಾಯರಾಣ ಜಮೀನದಲ್ಲಿ ಹಠವಾದಿ ಲೋಕೇಶ್ವರ ಸ್ವಾಮಿ ಎನ್ನುವ ವ್ಯಕ್ತಿ ಅನಧಿಕೃತವಾಗಿ ನಿರ್ಮಿಸಿದ್ದ ಕಟ್ಟಡಗಳನ್ನು ಗುರುವಾರ ಮುಂಜಾನೆ ತಹಶೀಲ್ದಾರ ಸುರೇಶ ಮುಂಜೆ ಅವರ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತದೊಂದಿಗೆ ಸಂಪೂರ್ಣವಾಗಿ ತೆರವುಗೊಳಿಸಲಾಯಿತು.
ಮೇಖಳಿ ಗ್ರಾಮದ ಗಾಯರಾಣ ರಿ.ಸ.ನಂ.225 ರ ಒಟ್ಟು 21 ಎಕರೆ 23 ಗುಂಟೆ ಪೈಕಿ 8 ಎಕರೆಯಲ್ಲಿ ಅತಿಕ್ರಮವಾಗಿ ಕಾಮಿ ಸ್ವಾಮಿ ಲೋಕೇಶ್ವರ ನಿರ್ಮಿಸಿದ್ದ ಮಠ ಮತ್ತು ಅನ್ನದಾಸೋಹ ಭವನವನ್ನು ಮುಂಜಾನೆ ಜೆಸಿಬಿ ಮೂಲಕ ನಿಯಮಾನುಸಾರ ತೆರವು ಕಾರ್ಯಾಚಣೆ ಮಾಡಿ, ಜಮೀನವನ್ನು ಇಲಾಖೆ ಸುಪರ್ದಿಗೆ ಪಡೆಯಲಾಗಿದೆ. ಸರ್ಕಾರ ಅನುದಾನ ನೀಡಿದ ನಂತರ ಗಾಯರಾಣ ಜಮೀನಿಗೆ ತಂತಿ ಬೇಲಿ ಹಾಕಲಾಗುವುದು ಎಂದು ತಹಶೀಲ್ದಾರ ಮುಂಜೆ ತಿಳಿಸಿದರು.
ತೆರವು ಕಾರ್ಯಾಚರಣೆಯಲ್ಲಿ ಸಿಪಿಐ ಬಿ.ಎಸ್.ಮಂಟೂರ, ಕಂದಾಯ ನೀರೀಕ್ಷಕ ಸೋಮಶೇಖರ ಜೋರೆ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 