ಗಾಯರಾಣ ಜಮೀನದಲ್ಲಿ ನಿರ್ಮಿಸಿದ ಅನಧಿಕೃತ ಕಟ್ಟಡಗಳ ತೆರವು
Removal of unauthorized buildings constructed on Gayarana land
ರಾಯಬಾಗ 29: ತಾಲೂಕಿನ ಮೇಖಳಿ ಗ್ರಾಮದ ಸರ್ಕಾರಿ ಗಾಯರಾಣ ಜಮೀನದಲ್ಲಿ ಹಠವಾದಿ ಲೋಕೇಶ್ವರ ಸ್ವಾಮಿ ಎನ್ನುವ ವ್ಯಕ್ತಿ ಅನಧಿಕೃತವಾಗಿ ನಿರ್ಮಿಸಿದ್ದ ಕಟ್ಟಡಗಳನ್ನು ಗುರುವಾರ ಮುಂಜಾನೆ ತಹಶೀಲ್ದಾರ ಸುರೇಶ ಮುಂಜೆ ಅವರ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತದೊಂದಿಗೆ ಸಂಪೂರ್ಣವಾಗಿ ತೆರವುಗೊಳಿಸಲಾಯಿತು.
ಮೇಖಳಿ ಗ್ರಾಮದ ಗಾಯರಾಣ ರಿ.ಸ.ನಂ.225 ರ ಒಟ್ಟು 21 ಎಕರೆ 23 ಗುಂಟೆ ಪೈಕಿ 8 ಎಕರೆಯಲ್ಲಿ ಅತಿಕ್ರಮವಾಗಿ ಕಾಮಿ ಸ್ವಾಮಿ ಲೋಕೇಶ್ವರ ನಿರ್ಮಿಸಿದ್ದ ಮಠ ಮತ್ತು ಅನ್ನದಾಸೋಹ ಭವನವನ್ನು ಮುಂಜಾನೆ ಜೆಸಿಬಿ ಮೂಲಕ ನಿಯಮಾನುಸಾರ ತೆರವು ಕಾರ್ಯಾಚಣೆ ಮಾಡಿ, ಜಮೀನವನ್ನು ಇಲಾಖೆ ಸುಪರ್ದಿಗೆ ಪಡೆಯಲಾಗಿದೆ. ಸರ್ಕಾರ ಅನುದಾನ ನೀಡಿದ ನಂತರ ಗಾಯರಾಣ ಜಮೀನಿಗೆ ತಂತಿ ಬೇಲಿ ಹಾಕಲಾಗುವುದು ಎಂದು ತಹಶೀಲ್ದಾರ ಮುಂಜೆ ತಿಳಿಸಿದರು.
ತೆರವು ಕಾರ್ಯಾಚರಣೆಯಲ್ಲಿ ಸಿಪಿಐ ಬಿ.ಎಸ್.ಮಂಟೂರ, ಕಂದಾಯ ನೀರೀಕ್ಷಕ ಸೋಮಶೇಖರ ಜೋರೆ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 