ರೈತರ ಜಮೀನಿನ ಫಲವತ್ತತೆಗೆಕೆರೆ ಹೂಳು ತೆಗೆಯುವುದು : ದುಂಡಿಗೌಡ್ರ
Removing silt from lakes to improve the fertility of farmers' lands: Dundigowdra
ಶಿಗ್ಗಾವಿ 04 : ಜಲ ಸಂರಕ್ಷಣೆ, ಅಂತರ್ಜಲ ಬಲವರ್ಧನೆ ಮತ್ತು ರೈತರ ಜಮೀನಿನ ಫಲವತ್ತತೆ ಹೆಚ್ಚಿಸುವ ಉದ್ದೇಶದಿಂದ ತಾಲೂಕಿನ ಹೊಸೂರು- ಯತ್ತಿನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತ ಮುಖಂಡರುಗಳ ಬೇಡಿಕೆ ಮೇರೆಗೆ ಹೂಳು ತೆಗೆಯಲಾಗುವುದು ಎಂದು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು. ಪಟ್ಟಣದ ವರದಿಗಾರರೊಂದಿಗೆ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ದುಂಡಸಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಯತ್ತಿನಹಳ್ಳಿ ಗ್ರಾಮದ ಸುಮಾರು 35 ಎಕರೆ ವಿಸ್ತೀರ್ಣವುಳ್ಳ ಬೆಳ್ಳಿಗಟ್ಟಿ ಕೆರೆಯನ್ನು ಏ 07 ರಂದು ಹೂಳು ತೆಗೆಯುವಕಾರ್ಯಕ್ರಮ ದಿವ್ಯ ಸಾನಿಧ್ಯವಹಿಸಿ ಹಾವೇರಿಯ ಶ್ರೀ ಮ.ನಿ.ಪ್ರ ಸದಾಶಿವ ಮಹಾಸ್ವಾಮಿಗಳು ಹುಕ್ಕೇರಿಮಠ ಶ್ರೀಗಳು ಭೂಮಿ ಪೂಜೆ ನೆರವೇರಿಸಿ ಕೆರೆ ಹೂಳು ತೆಗೆಯುವ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಈ ಸಂದರ್ಭದಲ್ಲಿ ತಾಲೂಕಿನ ಗಣ್ಯರು ವಿವಿಧ ಸಂಘಟನೆಗಳ ಪದಾಧಿಕಾರಿಗಳು ರೈತರು,ಗ್ರಾಮಸ್ಥರು ಉಪಸ್ಥಿತರಿರುವರು ಎಂದು ತಿಳಿಸಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 