ಆಯುಧ ಪರವಾನಿಗೆ ನವೀಕರಿಸಿಕೊಳ್ಳಿ : ಜಿಲ್ಲಾಧಿಕಾರಿ ಸೂಚನೆ
Renew your weapon license: District Collector's instructions
ಆಯುಧ ಪರವಾನಿಗೆ ನವೀಕರಿಸಿಕೊಳ್ಳಿ : ಜಿಲ್ಲಾಧಿಕಾರಿ ಸೂಚನೆ
ಕಾರವಾರ 15 : ಸ್ವಯಂ ರಕ್ಷಣೆ , ಬೆಳೆ ರಕ್ಷಣೆಗೆ ಆಯುಧ ಇಟ್ಟು ಕೊಂಡವರು ಪರವಾನಿಗೆ ನವೀಕರಣ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಆಯುಧ ಹೊಂದಿದವರಿಗೆ ಸೂಚಿಸಿದ್ದಾರೆ. ಆಯುಧ ನಿಯಮಾವಳಿಗಳಂತೆ ಆಯುಧ ಬಳಕೆ ಪರವಾನಿಗೆ ಮುಕ್ತಾಯಗೊಳ್ಳುವ ಕನಿಷ್ಠ 60 ದಿನಗಳೊಳಗಾಗಿ ನವೀಕರಣಕ್ಕೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶಿಸಿದ್ದಾರೆ. ಡಿಸೆಂಬರ್ 31 ರಂದು ನವೀಕರಣ ಅವಧಿ ಮುಕ್ತಾಯಗೊಳ್ಳಲಿರುವ ಅನುಜ್ಞಪ್ತಿದಾರರು ಮೂಲ ಆಯುದ ಅನುಜ್ಞಪ್ತಿ, ನಮೂನೆ 0-3 ಯಲ್ಲಿ ಅರ್ಜಿ, ನಮೂನೆ ಎಸ್-3 ಯಲ್ಲಿ ವೈದ್ಯಕೀಯ ಪ್ರಮಾಣ ಪತ್ರ. ನಮೂನೆ ಎಸ್-4 ದಲ್ಲಿ ಸ್ಥಳೀಯ ಪೊಲೀಸ್ ಠಾಣೆಯಿಂದ ಪಡೆದ ನಿರಾಕ್ಷೇಪಣಾ ಪತ್ರ., 5 ವರ್ಷಗಳ ಅವಧಿಗೆ ನವೀಕರಣ ಶುಲ್ಕ ರೂ.2.500 ನ್ನು ಏ-2 ತಂತ್ರಾಂಶದಲ್ಲಿ ಚಲನ್ ಸೃಜಿಸಿ ಲೆಕ್ಕ ಶೀರ್ಷಿಕೆ ಸಂಖ್ಯೆ 00-55-00-104-000-000 ನೇದಕ್ಕೆ ಭರಣ ಮಾಡಿದ ಮೂಲ ಚಲನ್, ಹಿಡುವಳಿ ಪ್ರಮಾಣ ಪತ್ರ. ದಾಖಲೆಗಳೊಂದಿಗೆ ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸಲು ತಿಳಿಸಿದೆ ಸ್ವ ರಕ್ಷಣೆ ಆಯುಧ ಅನುಜ್ಞಪ್ತಿದಾರರು ಸ್ಥಳೀಯ ಪೊಲೀಸ್ ಠಾಣೆಯಿಂದ ಪಡೆದ ನಿರಾಕ್ಷೇಪಣಾ ಪತ್ರವನ್ನು ಹೊರತುಪಡಿಸಿ ಮೇಲಿನ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 