ರೈತರಿಗೆ ಬೆಳೆ ಪರಿಹಾರ ನೀಡಲು ಸರ್ಕಾರಕ್ಕೆ ವರದಿ ನೀಡಿ: ಕೋನರಡ್ಡಿ
Report to the government to provide crop compensation to farmers: Konaraddy
ಧಾರವಾಡ, 25 ಈಗಾಗಲೇ ಮುಂಗಾರು ಮಳೆಯಿಂದ ನವಲಗುಂದ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಪ್ರದೇಶದ ಶಾಲಾ-ಕಾಲೇಜ ಹಾಗೂ ರಸ್ತೆಗಳು ಕಿತ್ತು ಹೋಗಿದ್ದು ದುರಸ್ತಿ ಮಾಡಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಜೊತೆ ಸಭೆ ಮಾಡಿ ಸರ್ಕಾರಕ್ಕೆ ವರದಿ ಮಾಡಲು ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಹೆಚ್.ಕೋನರಡ್ಡಿ ಹೇಳಿದರು.
ಅವರು ಇಂದು ಜಿ.ಪಂ ಕಚೇರಿಯಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕಿನ ಮುಂಗಾರು ಮಳೆಯಿಂದ ಹಾನಿಯಾದ ಹಾಗೂ ಇತರೆ ಕಾಮಗಾರಿಗಳ ಬಗ್ಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯದರ್ಶಿ ಭುವನೇಶ ಪಾಟೀಲ ಅವರೊಂದಿಗೆ ಚರ್ಚಿಸಿ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಕ್ರಿಯಾ ಯೋಜನೆಗೆ ಮಂಜೂರಾತಿ ಪಡೆದು ಕಾಮಗಾರಿ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ತ್ವರಿತವಾಗಿ ಸರ್ವೆ ಮಾಡಿ ಸರ್ಕಾರಕ್ಕೆ ಹಾನಿಯಾದ ವರದಿಯನ್ನು ತಕ್ಷಣ ಸಲ್ಲಿಸಲು ಕೋನರಡ್ಡಿ ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯದರ್ಶಿ ಭುವನೇಶ ಪಾಟೀಲ, ಉಪ ಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಪಿಆರ್ಡಿ ಇಇ ಸೊಪ್ಪಿಮಠ, ಆರ್.ಡಬ್ಲೂ.ಎಸ್. ಜಗದೀಶ ಪಾಟೀಲ, ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಎಸ್. ಕೆಳದಿಮಠ, ತಾ.ಪಂ. ಇಓ ಗಳಾದ ಶ್ರೀಮತಿ ಭಾಗ್ಯಶ್ರೀ ಜಾಗೀರದಾರ, ಪಿ.ಆರ್. ಬಡೇಖಾನ, ರಾಮಚಂದ್ರ ಹೊಸಮನಿ, ಇಂಜಿನಿಯರಗಳಾದ ಎಂ.ಜಿ. ಶಿಂಧೆ, ಬಿ.ಎನ್. ಗೌಡರ, ಎಸ್.ಎಸ್. ಲಂಗೋಟಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 