ರೈತರಿಗೆ ಬೆಳೆ ಪರಿಹಾರ ನೀಡಲು ಸರ್ಕಾರಕ್ಕೆ ವರದಿ ನೀಡಿ: ಕೋನರಡ್ಡಿ
Report to the government to provide crop compensation to farmers: Konaraddy
ಧಾರವಾಡ, 25 ಈಗಾಗಲೇ ಮುಂಗಾರು ಮಳೆಯಿಂದ ನವಲಗುಂದ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಪ್ರದೇಶದ ಶಾಲಾ-ಕಾಲೇಜ ಹಾಗೂ ರಸ್ತೆಗಳು ಕಿತ್ತು ಹೋಗಿದ್ದು ದುರಸ್ತಿ ಮಾಡಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಜೊತೆ ಸಭೆ ಮಾಡಿ ಸರ್ಕಾರಕ್ಕೆ ವರದಿ ಮಾಡಲು ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಹೆಚ್.ಕೋನರಡ್ಡಿ ಹೇಳಿದರು.
ಅವರು ಇಂದು ಜಿ.ಪಂ ಕಚೇರಿಯಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕಿನ ಮುಂಗಾರು ಮಳೆಯಿಂದ ಹಾನಿಯಾದ ಹಾಗೂ ಇತರೆ ಕಾಮಗಾರಿಗಳ ಬಗ್ಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯದರ್ಶಿ ಭುವನೇಶ ಪಾಟೀಲ ಅವರೊಂದಿಗೆ ಚರ್ಚಿಸಿ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಕ್ರಿಯಾ ಯೋಜನೆಗೆ ಮಂಜೂರಾತಿ ಪಡೆದು ಕಾಮಗಾರಿ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ತ್ವರಿತವಾಗಿ ಸರ್ವೆ ಮಾಡಿ ಸರ್ಕಾರಕ್ಕೆ ಹಾನಿಯಾದ ವರದಿಯನ್ನು ತಕ್ಷಣ ಸಲ್ಲಿಸಲು ಕೋನರಡ್ಡಿ ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯದರ್ಶಿ ಭುವನೇಶ ಪಾಟೀಲ, ಉಪ ಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಪಿಆರ್ಡಿ ಇಇ ಸೊಪ್ಪಿಮಠ, ಆರ್.ಡಬ್ಲೂ.ಎಸ್. ಜಗದೀಶ ಪಾಟೀಲ, ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಎಸ್. ಕೆಳದಿಮಠ, ತಾ.ಪಂ. ಇಓ ಗಳಾದ ಶ್ರೀಮತಿ ಭಾಗ್ಯಶ್ರೀ ಜಾಗೀರದಾರ, ಪಿ.ಆರ್. ಬಡೇಖಾನ, ರಾಮಚಂದ್ರ ಹೊಸಮನಿ, ಇಂಜಿನಿಯರಗಳಾದ ಎಂ.ಜಿ. ಶಿಂಧೆ, ಬಿ.ಎನ್. ಗೌಡರ, ಎಸ್.ಎಸ್. ಲಂಗೋಟಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 