ಸಾಮಾಜಿಕ ಕಾರ್ಯಕರ್ತನಿಗೆ ಜೀವ ಬೆದರಿಕೆ ರಕ್ಷಣೆಗೆ ಮನವಿ
ಲೋಕದರ್ಶನ ವರದಿ
ಮುಂಡಗೋಡ 4: ನಂದಿಕಟ್ಟಾ ಗ್ರಾಮದ ಸಾಮಾಜಿಕ ಕಾರ್ಯಕರ್ತನೊಬ್ಬನಿಗೆ ಜೀವ ಬೆದರಿಕೆಯಿದ್ದು ರಕ್ಷಣೆ ನೀಡುವಂತೆ ಜಿಲ್ಲಾ ವರಿಷ್ಠಧಿಕಾರಿಗೆ ಮತ್ತು ತಹಶೀಲ್ದಾರರಿಗೆ ಗುರುವಾರ ಮನವಿ ಸಲ್ಲಿಸಿದ್ದಾರೆ.
ನಂದಿಕಟ್ಟಾ ಗ್ರಾಮದ ಬಸವರಾಜ ಲೋಹಾರ ಎಂಬಾತನೇ ಸಾಮಜಿಕ ಕಾರ್ಯಕರ್ತನಾಗಿದ್ದು ತಾಲೂಕಿನ ನಂದಿಕಟ್ಟಾ ಮತ್ತು ಸುತ್ತು ಮುತ್ತಲಿನ ಬಡವರಿಗೆ, ವಿಕಲಚೇತನರಿಗೆ, ವಿದ್ಯಾಥರ್ಿಗಳಿಗೆ, ಮಹಿಳೆಯರಿಗೆ, ವೃದ್ಧರಿಗೆ, ವಿಧವೆಯರ ಮತ್ತು ರೈತರ ಪರವಾದ ಏಳಿಗೆಗೆ ಶ್ರಮಿಸುತ್ತಿದ್ದೇನೆ.
ಆದರೆ ನಂದಿಕಟ್ಟಾ ಗ್ರಾಮದ ಕೆಲವರು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಇವರ ಮೂಲ ವಿರೋದಕ್ಕೆ ಕಾರಣ ಆಸ್ತಿ ಜಮೀನುಗಳಾಗಿದ್ದು ಇವರಿಗೆ ಇಲ್ಲಿನ ಕೆಳ ದಜರ್ೆಯ ಅಧಿಕಾರಿಗಳು ಅಕ್ರಮ ಅವ್ಯವಾಹರಗಳಲ್ಲಿ ಶಾಮೀಲಾಗಿದ್ದಾರೆ. ಇದರ ವಿರುದ್ಧ ನಾನು ಧ್ವನಿ ಎತ್ತಿದ್ದಕ್ಕೆ ನನ್ನ ವಿರುದ್ಧವೆ ಅಪಪ್ರಚಾರ ಮಾಡುತ್ತಿದ್ದಾರೆ. ಮತ್ತು ಇದೆ ಗ್ರಾಮದ ಕೆಲವರಿಂದ ಜಾತಿ ಹೆಸರಿನಲ್ಲಿ ನನ್ನ ವಿರುದ್ದ ಸುಳ್ಳು ದೂರು ನೀಡಿ ಕಾನೂನನ್ನು ದುರೂಪಯೋಗ ಪಡಿಸುವ ಸಾಧ್ಯತೆ ಇದ್ದು ಇವರಿಂದ ಜೀವಕ್ಕೆ ಅಪಾಯ ಇದೆ ಮತ್ತು ರಕ್ಷಣೆ ನೀಡಿ ಸೂಕ್ತ ತನಿಖೆ ನಡೆಸುವಂತೆ ಮನವಿಯಲ್ಲಿ ವಿನಂತಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 