ಬೋಧಕೇತರ ಅಕ್ರಮ ನೇಮಕಾತಿ ವಿರೋಧಿಸಿ ಮನವಿ ಸಲ್ಲಿಕೆ
ಲೋಕದರ್ಶನವರದಿ
ರಾಣೇಬೆನ್ನೂರು08: ವಿಜಯನಗರ ಕೃಷ್ಣದೇವರಾಯ ವಿವಿಯಲ್ಲಿ ಬೋಧಕ ಮತ್ತು ಭೋಧಕೇತರ ಸಿಬ್ಬಂದಿ ಅಕ್ರಮ ನೇಮಕಾತಿ ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟಿಸಿ ತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದರು.
ಕಳೆದ 6 ತಿಂಗಳಿಂದ ಬೋಧಕ ಭೋಧಕೇತರ ಸಿಬ್ಬಂದಿ ನೇಮಕಾತಿಯ ನಿಯಮಾವಳಿಯನ್ನು ಉಲ್ಲಂಘಿಸಿ ನೇಮಕ ಮಾಡಿಕೊಂಡಿದ್ದು, ಕುಲಪತಿಗಳು ಬಡ ಮತ್ತು ಪ್ರತಿಭಾನ್ವಿತ ಅಭ್ಯಥರ್ಿಗಳ ಜೊತೆ ಚೆಲ್ಲಾಟವಾಡುತ್ತಿದ್ದಾರೆ.
ವಿವಿಯಲ್ಲಿ ನೇಮಕಾತಿಗೆ ಸಂಬಂಧಿಸಿದಂತೆ ಭಾರಿ ಭ್ರಷ್ಟಾಚಾರ ನಡೆದಿದ್ದರೂ ಸಹ ರಾಜ್ಯ ಸಕರ್ಾರ ಮತ್ತು ಉನ್ನತ ಶಿಕ್ಷಣ ಇಲಾಖೆ ಸಚಿವರು ಹಾಗೂ ರಾಜ್ಯಪಾಲರು ಮೌನವಹಿಸಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ, ತಕ್ಷಣ ನೇಮಕಾತಿ ರದ್ದು ಪಡಿಸಿ ಹೊಸದಾಗಿ ನೇಮಕ ಮಾಡಿಕೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ತಾಲೂಕ ಸಂಚಾಲಕರಾದ ರಾಘವೇಂದ್ರ ಪಿ., ನಗರ ಸಹಕಾರ್ಯದಶರ್ಿ ಟಿಪ್ಪು, ಕಾರ್ಯಕರ್ತರಾದ ಶ್ರೀಕಾಂತ ಕುಪ್ಪೇಲೂರ, ರೇವಣಸಿದ್ದಪ್ಪ, ಪರಶುರಾಮ, ಪ್ರದೀಪ ಸೇರಿದಂತೆ ಮತ್ತಿತರೆ ಕಾರ್ಯಕರ್ತರು, ಪದಾಧಿಕಾರಿಗಳು, ವಿಧ್ಯಾಥರ್ಿಗಳು ಪಾಲ್ಗೊಂಡಿದ್ದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 