ಹಿರಿಯ ನಾಗರೀಕರ ಕುಂದು ಕೊರತೆ ನಿವಾರಣೆಗಾಗಿ ಮನವಿ
ಲೋಕದರ್ಶನ ವರದಿ
ಬೆಳಗಾವಿ, 6: ಹಿರಿಯ ನಾಗರಿಕರು ಅನೇಕ ಸಮಸ್ಯಗಳನ್ನು ಎದುರಿಸುತ್ತಿದ್ದು ಅವರ ಸಮಸ್ಯೆಗಳು ಕುಂದುಕೊರತೆಗಳು, ಬೇಡಿಕೆಗಳು ಹಾಗೂ ಸಕರ್ಾರದಿಂದ ಅನುಷ್ಠಾನವಾಗಬೇಕಾದ ಕಾರ್ಯಕ್ರಮಗಳನ್ನು ಕೂಡಲೇ ಜಾರಿಗೆ ತರಬೇಕೆಂದು ಆಗ್ರಹಿಸಿ ಹಿರಿಯ ನಾಗರಿಕರ ಸಂಘ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.
ಹಿರಿಯ ನಾಗರಿಕರು ಅನೇಕ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಅವರಿಗೆ ಸಿಗಬೇಕಾದ ಸವಲತ್ತುಗಳು ಸಕಾಲದಲ್ಲಿ ದೊರಕುತ್ತಿಲ್ಲ. ಸಮಾಜದಲ್ಲಿ ಹಿರಿಯರಿಗೆ ಸೂಕ್ತ ಗೌರವ ಮತ್ತು ಅವರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕೆಂದು ಸಹ ಮನವಿಯಲ್ಲಿ ಕೊರಲಾಗಿದೆ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಚಳಿಗಾಲ ಅಧಿವೇಶನ ಮುಗಿದ ನಂತರ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಹಿರಿಯ ನಾಗರಿಕದ ಸಂಘದ ಪದಾಧಿಕಾರಿಗಳೊಂದಿಗೆ ಒಂದು ಜಂಟಿ ಸಭೆ ನಡೆಸಿ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಹಿರಿಯ ನಾಗರಿಕ ಸಂಘದ ರಾಜ್ಯ ಅಧ್ಯಕ್ಷರಾದ ಎ.ವಾಯ್. ಬೆಂಡಿಗೇರಿ, ಪ್ರಧಾನ ಕಾರ್ಯದಶರ್ಿ ಎಮ್.ಎಸ್. ಮುದಕವಿ, ಜಿಲ್ಲಾಧ್ಯಕ್ಷರಾದ ಡಾ. ಬಿಎಂ. ಗೋಮಾಡಿ, ಉಪಾಧ್ಯಕ್ಷ ಎಸ್.ಜಿ ಸಿದ್ನಾಳ, ಪ್ರಸಾದ ಹಿರೇಮಠ, ಪ್ರಧಾನ ಕಾರ್ಯದಶರ್ಿ ಆನಂದ ಕಕರ್ಿ ಸೇರಿದಂತೆ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 