ಗೋಲ್ಡನ್ ಚಾನ್ಸ್ ಪರೀಕ್ಷೆಗೆ ಅವಕಾಶ ಕೋರಿ ಮನವಿ
ಲೋಕದರ್ಶನ ವರದಿ
ಬೈಲಹೊಂಗಲ 02: ಪದವಿ ಪರೀಕ್ಷೆಗಳಲ್ಲಿ ಒಂದು, ಎರಡು ವಿಷಯಗಳಲ್ಲಿ ಅನುರ್ತಿಣಗೊಂಡು ವಿದ್ಯಾರ್ಥಿಗಳಿಗೆ ಗೊಲ್ಡನ್ ಚಾನ್ಸ್ ಪರೀಕ್ಷೆ ನಡೆಸುವ ಮೂಲಕ ಅವರಿಗೆ ಪದವಿದರರಾಗಲು ವಿಶ್ವವಿದ್ಯಾಲಯಗಳು ಅನೂಕೂಲ ಮಾಡಿ, ಅವರಿಗೆ ಹೆಚ್ಚುವರಿ ವಿದ್ಯಾಬ್ಯಾಸಕ್ಕೆ ಸಹಕರಿಸಬೇಕೆಂದು ಉಪವಿಭಾಗಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ, ಉನ್ನತ ಶಿಕ್ಷಣ ಸಚಿವರಿಗೆ, ಕುಲಪತಿಗಳಿಗೆ ಸೋಮವಾರ ಅಂಬೇಡ್ಕರ ಯುವ ಸೇನೆಯ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಅಂಬೇಡ್ಕರ ಯುವ ಸೇನೆ ಸಂಸ್ಥಾಪಕ ಅಧ್ಯಕ್ಷ ಡಾ.ಅರ್ಜುನ ಬಂಡಿ ಮಾತನಾಡಿ, ವಿಷಯಗಳನ್ನು ಬ್ಯಾಕ್ ಇಟ್ಟುಕೊಂಡು ಅರ್ಧಪದವಿಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನಿರುದ್ಯೋಗಿಗಳಾಗಿ ಯುವಕರು ಅಲೇದಾಡುತ್ತಿದ್ದಾರೆ. ಈಗಾಗಲೇ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಪ್ರಾರಂಭವಾದನಿಗಿಂದಲೂ ಇಲ್ಲಿವ ರೆಗೂ ಒಂದು ಬಾರಿಯೂ ಗೋಲ್ಡನ್ ಚಾನ್ಸ್ ಪರೀಕ್ಷೆಗೆ ವಿಶ್ವವಿದ್ಯಾಲಯ ಅನುಮತಿ ನೀಡಿಲ್ಲ. ಹೀಗೆ ಮಾಡಿದರೆ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡಿದಂತಾಗುತ್ತದೆ ಆದ ಕಾರಣ ಅಂತಹ ಯುವಕರಿಗೆ ಪುನ: ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟು ಅವರ ಜೀವನ ಸುಧಾರಿಸಿಕೊಂಡು ಹೋಗಲು ಒಂದು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.
ರಾಜ್ಯಾಧ್ಯಕ್ಷ ಫಕಿರಪ್ಪ ಹೊಸಮನಿ, ಪರಶುರಾಮ ರಾಯಬಾಗ, ಕಿರಣ ಹಂಚಿನಮನಿ, ಅನಿಲ ಚಲವಾದಿ, ಸುರೇಶ ಮಾದರ, ಮಹೇಶ ಕಲಕುಟಕರ, ಮಂಜುನಾಥ ಅಗಸಗಿ, ದೇವರಾಜ ವಕ್ಕುಂದ ಮಾರುತಿ ಕೊಂಡೂರ ಹಾಗೂ ಪದಾಧಿಕಾರಿಗಳು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 