ಕಲಕೇರಿ ಗ್ರಾ.ಪಂ.ಅವ್ಯವಹಾರ ತನಿಖೆಗೆ ಮನವಿ
Request for inquiry into irregularities at Kalakeri Gram Panchayat
ಲೋಕದರ್ಶನ ವರದಿ
ತಾಳಿಕೋಟೆ 02: ತಾಲ್ಲೂಕಿನ ಕಲಕೇರಿ ಗ್ರಾಮ ಪಂಚಾಯತಿ ಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ತನಿಖೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಜಿ.ಸಾಗರ ಬಣ) ಕಲಕೇರಿ ವಲಯದವರು ಹಲವು ಬಾರಿ ಮನವಿ ಮಾಡಿದರೂ ಕ್ರಮ ಜರುಗಿಸಿಲ್ಲವೆಂದು ಆರೋಪಿಸಿ ತಾಳಿಕೋಟೆ ತಾ.ಪಂ.ಕಚೇರಿಗೆ ಬಂದು ಸಮಿತಿಯವರು ತಾ.ಪಂ.ಇಓ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅನಸೂಯಾ ಚಲವಾದಿಯವರು ಒಂದು ವಾರದೊಳಗೆ ಅಗತ್ಯ ಕ್ರಮದ ಭರವಸೆ ನೀಡಿದರು. ಈ ಸಮಯದಲ್ಲಿ ತಹಶೀಲ್ದಾರ ಡಾ.ವಿನಯಾ ಹೂಗಾರ, ಸಿಪಿಐ ಫಸಿಯುದ್ದಿನ್, ಪಿಎಸೈ ಜ್ಯೋತಿ ಖೋತ, ಕಲಕೇರಿ ವಲಯ ಸಂಚಾಲಕ ಹಣಮಂತ ವಡ್ಡರ, ಪದಾಧಿಕಾರಿಗಳಾದ ಸೋಮಶೇಖರ ಬಡಿಗೆರ, ದೇವೀಂದ್ರ ವಡ್ಡರ, ಸದ್ದಾಂ ತುಂಬಗಿ, ಭಾಷಾಸಾಬ ಮನಗೂಳಿ, ಸಲೀಂ ನಾಯ್ಕೊಡಿ, ಪ್ರಕಾಶ ದೊಡಮನಿ ಇತರರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 