ಪೋಷಕರ ಪತ್ತೆಗಾಗಿ ಮನವಿ
ಲೋಕದರ್ಶನ ವರದಿ
ಬಳ್ಳಾರಿ17: ಬುಕ್ಕಸಾಗರ ಗ್ರಾಮದ ಕಮಲಾಪುರದ ಕಂಪ್ಲಿ ರಸ್ತೆಯ ಪಕ್ಕದಲ್ಲಿರುವ ಗಣೇಶ ದೇವಸ್ಥಾನದಲ್ಲಿ ಆಗಸ್ಟ್ 12 ರಂದು ಸುಮಾರು 5 ದಿನಗಳದ ಅನಾಥ ಹೆಣ್ಣು ಕೂಸು ಪತ್ತೆಯಾದ ಕುರಿತು ಅಮೂಲ್ಯ (ಜಿ)ವಿಶೇಷ ದತ್ತು ಸಂಸ್ಥೆಯಲ್ಲಿ ದಾಖಲಾಗಿದೆ ಎಂದು ಸಂಸ್ಥೆಯ ಅಧೀಕ್ಷಕರು ತಿಳಿಸಿದ್ದಾರೆ.
ಕೂಸುವಿನ ಚಹರೆ : ಬಿಳಿ ಮೈಬಣ್ಣ, ದುಂಡು ಮುಖ, ತಲೆಯಲ್ಲಿ ಕಪ್ಪು ಕೂದಲು ಇರುತ್ತದೆ. ಈ ಮಗುವು ಆ.12 ರಂದು ಸಿಕ್ಕಿದ್ದು, ಹೊಸಪೇಟೆಯ ಡಾನ್ ಬಾಸ್ಕೋ, ಚೈಲ್ಡ್ ಲೈನ್ ವಶಕ್ಕೆ ಪಡೆದುಕೊಂಡು ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಅಮೂಲ್ಯ (ಜಿ)ವಿಶೇಷ ದತ್ತು ಸಂಸ್ಥೆಗೆ ನೀಡಿರುತ್ತಾರೆ. ಈ ಮಗುವಿನ ಸಂಬಂಧಪಟ್ಟವರು/ಪೋಷಕರು ಇದ್ದಲ್ಲಿ ಕೂಡಲೇ ಅಧೀಕ್ಷಕರು, ಅಮೂಲ್ಯ (ಜಿ) ವಿಶೇಷ ದತ್ತು ಸಂಸ್ಥೆ, ಬಳ್ಳಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಂಟೋನ್ಮಂಟ್, ಬಳ್ಳಾರಿ. ದೂ.ಸಂ.08392-297101 ಅಥವಾ ಇಮೇಲ್ ಐಡಿ: ಖಣ62@ರಟಚಿ.ಛಿಠಟ ಗೆ ಮಾಹಿತಿ ನೀಡಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 