ಬೈಲಹೊಂಗಲಕ್ಕೆ ಜಿಲ್ಲಾ ಕೇಂದ್ರ ಸ್ಥಾನ ಘೋಷಿಸಲು ಮನವಿ
ಲೋಕದರ್ಶನ ವರದಿ
ಬೈಲಹೊಂಗಲ 20: ಬೆಳಗಾವಿ ಜಿಲ್ಲೆ ವಿಭಜನೆ ಮಾಡಬಾರದು, ಒಂದು ವೇಳೆ ಅನಿವಾರ್ಯವಾದಲ್ಲಿ ಉಪವಿಭಾಗಕೇಂದ್ರವಾದ ಬೈಲಹೊಂಗಲವನ್ನು ನೂತನ ಜಿಲ್ಲಾ ಕೇಂದ್ರ ಮಾಡುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲಾ ವಿರೋಧಿ ಹೋರಾಟ ಸಮಿತಿ ಸದಸ್ಯರು ಸಹಕಾರ ಸಚಿವ ಬಂಡೆಪ್ಪಕಾಶಂಪುರಅವರಿಗೆ ಮನವಿ ಅಪರ್ಿಸಿದರು.
ಬೆಳಗಾವಿ ಜಿಲ್ಲೆ ವಿಭಜಿಸಿದರೆ ಮರಾಠಿಗರ ಪ್ರಾಬಲ್ಯ ಹೆಚ್ಚಾಗುವುದರ ಜತೆಗೆ ಗಡಿ ಕನ್ನಡಿಗರ ಮೇಲೆ ಹಲ್ಲೆ ನಡೆಯಬಹುದು, ಆದ್ದರಿಂದಯಾವುದೇಕಾರಣಕ್ಕೂ ಬೆಳಗಾವಿ ಜಿಲ್ಲೆ ವಿಭಜನೆ ಮಾಡದೆ, ಬೆಳಗಾವಿ ಜಿಲ್ಲೆ ಅಖಂಡವಾಗಿರುವಂತೆ ಕಾಳಜಿವಹಿಸಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಸಕ ಮಹಾಂತೇಶ ಕೌಜಲಗಿ, ಜಿ.ಪಂ.ಸದಸ್ಯ ಶಂಕರ ಮಾಡಲಗಿ, ಮುಖಂಡರಾದ ಶಿವರಂಜನ ಬೋಳಣ್ಣವರ, ಮಹಾಂತೇಶ ತುರಮರಿ, ಸಿ.ಕೆ.ಮೆಕ್ಕೇದ, ಮಡಿವಾಳಪ್ಪಾ ಹೋಟಿ, ರಾಜಶೇಖರ ಮೂಗಿ, ರಾಜುಜನ್ಮಟ್ಟಿ, ಮಹೇಶ ಬೆಲ್ಲದ, ಮಹೇಶ ಹರಕುಣಿ, ಬಾಬು ಕುಡಸೋಮಣ್ಣವರ, ಕುಮಾರ ದೇಶನೂರ, ಮಹಾಂತೇಶ ಮತ್ತಿಕೊಪ್ಪ, ಎಫ್.ಎಸ್.ಸಿದ್ಧನಗೌಡರ, ಈರಣ್ಣಾ ಬೆಟಗೇರಿ, ಮಾರುತಿ ತಿಗಡಿ, ವಿರೂಪಾಕ್ಷ ಕೋರಿಮಠ, ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 