ನಾಡ ಕಛೇರಿಗೆ ಡಾಟಾ ಎಂಟ್ರಿ ಆಪರೇಟರ್ನ್ನು ನೇಮಿಸಲು ಮನವಿ
Request to appoint a data entry operator for the Nada Kacheri
ಲೋಕದರ್ಶನ ವರದಿ
ಕಂಪ್ಲಿ 08: ಪಟ್ಟಣದ ಭೀಮ್ ಆರ್ಮಿ ಪದಾಧಿಕಾರಿಗಳು, ಇಲ್ಲಿನ ನಾಡ ಕಾರ್ಯಾಲಯದಲ್ಲಿ ಹೆಚ್ಚುವರಿಯಾಗಿ ಕಂಪ್ಯೂಟರ್ ಡಾಟಾ ಎಂಟ್ರಿ ಆಪರೇಟರ್ನ್ನು ನೇಮಿಸಬೇಕೆಂದು ಒತ್ತಾಯಿಸಿ, ತಹಸೀಲ್ದಾರ ಜೂಗುಲ ಮಂಜುನಾಯಕ ಅವರಿಗೆ ಮನವಿ ಬುಧವಾರ ಸಲ್ಲಿಸಿದರು. ಭೀಮ್ ಆರ್ಮಿ ಗೌರವ ಅಧ್ಯಕ್ಷ ಸಣಾಪುರ ಮರಿಸ್ವಾಮಿ ಮಾತನಾಡಿ, ಈ ಕಾರ್ಯಾಲಯದಲ್ಲಿ ಒಬ್ಬ ಡಾಟಾ ಎಂಟ್ರಿ ಆಪರೇಟರ್ ಇದ್ದಾರೆ. ಆದರೆ ಕಚೇರಿಗೆ ಜಾತಿ, ಆದಾಯ, ಎ,ಬಿ,ಸಿ ತಿದ್ದುಪಡಿ ಸೇರಿ ಕೆಲ ಅರ್ಜಿಗಳನ್ನು ಸಲ್ಲಿಸಲು ಅನೇಕ ಜನರು ಬರುತ್ತಾರೆ.
ಆದರೆ ಒಬ್ಬರಿಂದ ಎಲ್ಲ ಜನತೆಯ ಅರ್ಜಿ ಸ್ವೀಕರಿಸಲು ಅಡಚಣೆಯಾಗುತ್ತಿದ್ದು, ಹೆಚ್ಚುವರಿಯಾಗಿ ಡಾಟಾ ಎಂಟ್ರಿ ಆಪರೇಟರ್ನ್ನು ನೇಮಿಸಬೇಕು ಎಂದರು. ಭೀಮ್ ಆರ್ಮಿ ಅಧ್ಯಕ್ಷ ಎ.ಎಸ್.ಯಲ್ಲಪ್ಪ ಮಾತನಾಡಿ, ಜನತೆ ಸಲ್ಲಿಸುವ ಪ್ರತಿ ಅರ್ಜಿಗೂ ಶುಲ್ಕದ ಪಟ್ಡಿಯನ್ನು ಕಚೇರಿಯಲ್ಲಿ ಅಳವಡಿಸಬೇಕು. ಬೇಗನೆ ಹೆಚ್ಚುವರಿ ಡಾಟಾ ಎಂಟ್ರಿ ಆಪರೇಟರ್ನ್ನು ನಿಯೋಜನೆ ಮಾಡಬೇಕು ಎಂದರು. ಪ್ರಮುಖರಾದ ಸಿಕ್ಲಿ ಬಸವರಾಜ, ಆರ್.ಎಂ.ಎಚ್.ಧನುಷ್, ಮೆಟ್ರಿ ಬಸವರಾಜ, ಎಚ್.ಹುಲಿಗೇಶ್, ಪ್ರವೀಣ, ಶಿವಕುಮಾರ್, ಬಸಮ್ಮ ಇತರಿದ್ದರು.
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ 