ಏ.14ರಂದು ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲು ಮನವಿ
Request to celebrate BR Ambedkar Jayanti on Oct.14
ಲೋಕದರ್ಶನ ವರದಿ
ಸಿಂದಗಿ 13: ಆರ್ಬಿಐ ಅಧೀನದಲ್ಲಿ ಬರುವ ಪಿಕೆಪಿಎಸ್, ಡಿಸಿಸಿ ಬ್ಯಾಂಕ್, ಪೈನಾನ್ಸ್ಗಳಲ್ಲಿ ಏ.14ರಂದು ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸುವಂತೆ ಆದೇಶ ನೀಡಬೇಕು ಎಂದು ಭೀಮ ಸೇನೆ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ತಹಶೀಲ್ದಾರ್ ಕರೆಪ್ಪ ಬೆಳ್ಳಿ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಭೀಮ್ ಸೇನೆ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಅನಿಲ ಹೊಸಮನಿ, ಸಮಾಜ ಹೋರಾಟಗಾರ ಹರ್ಷವರ್ಧನ ಪೂಜಾರಿ ಮಾತನಾಡಿ, ಸಿಂದಗಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಆರ್ಬಿಐ ಅಧೀನದಲ್ಲಿ ಬರುವ ಪಿಕೆಪಿಎಸ್, ಡಿಸಿಸಿ ಬ್ಯಾಂಕ್, ಪೈನಾನ್ಸ್ಗಳಲ್ಲಿ ಏ.14 ರಂದು ಕಡ್ಡಾಯವಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಿಸುವಂತೆ ಲಿಖಿತ ರೂಪದಲ್ಲಿ ಆದೇಶ ನೀಡಬೇಕು ಎಂದು ಮನವಿ ಮಾಡಿಕೊಂಡರು.
ಮನವಿ ಸ್ವೀಕರಿಸಿ ತಹಶೀಲ್ದಾರ ಕರೆಪ್ಪ ಬೆಳ್ಳಿ ಮಾತನಾಡಿ, ಆರ್ಬಿಐ ಅಧೀನದಲ್ಲಿ ಬರುವ ಆರ್ಥಿಕ ವ್ಯವಹಾರ ಸಂಸ್ಥೆಗಳಲ್ಲಿ ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಆದೇಶ ಆಚರಿಸುವಂತೆ ನೀಡಲಾಗುವುದು ಎಂದು ಭರವಸೆ ನೀಡಿದರು. ಈ ವೇಳೆ ತಾಲೂಕಾಧ್ಯಕ್ಷ ಪ್ರಜ್ವಲ್ ಮಲ್ಲಾರಿ, ದ್ಯಾವಪ್ಪ ಕುದರಗುಂಡ, ಲಕ್ಷ್ಮಣ ಓಲೇಕಾರ ಸೇರಿದಂತೆ ಇತರರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 