ಬಂಜಾರ ಸಮಾಜ ಸಮುದಾಯ ಭವನಕ್ಕೆ ಜಾಗೆ ನೀಡಲು ಮನವಿ
Request to give space to Banjara Samaj Community Bhawan
ಬೆಳಗಾವಿ 09: ಬಂಜಾರ ಸಮಾಜಕ್ಕೆ ಸಮುದಾಯ ಭವನ ನಿರ್ಮಾಣಕ್ಕೆ ಜಾಗೆ ಮಂಜೂರ ಮಾಡುವಂತೆ ಬೆಳಗಾವಿ ಜಿಲ್ಲಾ ಬಂಜಾರ ಜನ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಬೆಂಗಳೂರುನಲ್ಲಿ ಮನವಿ ಸಲ್ಲಿಸಿದರು.
ಬೆಳಗಾವಿ ಮಹಾನಗರದಲ್ಲಿ ಬಂಜಾರ ಸಮಾಜದ ಸಾವಿರಾರು ಜನರು ವಾಸವಿದ್ದಾರೆ. ನಮ್ಮ ಸಮಾಜವು ಆರ್ಥಿಕವಾಗಿ ಹಿಂದುಳಿದಿದೆ. ಸಮಾಜದ ಜನರಿಗೆ ಮದುವೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ನಮ್ಮದೇ ಆದ ಸಮುದಾಯ ಭವನದ ಅವಶ್ಯಕತೆಯಿದೆ. ಆದ್ದರಿಂದ ಬೆಳಗಾವಿ ಮಹಾನಗರದ ಸುತ್ತಮುತ್ತ ಇರುವ ಸರಕಾರಿ ಜಾಗೆಯಲ್ಲಿ 1 ಎಕರೆಯಷ್ಟಾದರೂ ಜಾಗೆಯನ್ನು ಸಮುದಾಯ ಭವನ ನಿರ್ಮಾಣಕ್ಕೆ ಮಂಜೂರು ಮಾಡುವಂತೆ ಪದಾಧಿಕಾರಿಗಳು ಸಮಾಜದ ಪರವಾಗಿ ವಿನಂತಿಸಿದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾಂಡುರಂಗ ನಾಯಕ್, ಜಿಲ್ಲಾಧ್ಯಕ್ಷ ಎಂ.ಟಿ.ರಾಠೋಡ, ಕಾರ್ಯಾಧ್ಯಕ್ಷ ಕೃಷ್ಣಾ ರಾಠೋಡ ಸೇರಿದಂತೆ ಇತರರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 