ಬಂಜಾರ ಸಮಾಜ ಸಮುದಾಯ ಭವನಕ್ಕೆ ಜಾಗೆ ನೀಡಲು ಮನವಿ
Request to give space to Banjara Samaj Community Bhawan
ಬೆಳಗಾವಿ 09: ಬಂಜಾರ ಸಮಾಜಕ್ಕೆ ಸಮುದಾಯ ಭವನ ನಿರ್ಮಾಣಕ್ಕೆ ಜಾಗೆ ಮಂಜೂರ ಮಾಡುವಂತೆ ಬೆಳಗಾವಿ ಜಿಲ್ಲಾ ಬಂಜಾರ ಜನ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಬೆಂಗಳೂರುನಲ್ಲಿ ಮನವಿ ಸಲ್ಲಿಸಿದರು.
ಬೆಳಗಾವಿ ಮಹಾನಗರದಲ್ಲಿ ಬಂಜಾರ ಸಮಾಜದ ಸಾವಿರಾರು ಜನರು ವಾಸವಿದ್ದಾರೆ. ನಮ್ಮ ಸಮಾಜವು ಆರ್ಥಿಕವಾಗಿ ಹಿಂದುಳಿದಿದೆ. ಸಮಾಜದ ಜನರಿಗೆ ಮದುವೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ನಮ್ಮದೇ ಆದ ಸಮುದಾಯ ಭವನದ ಅವಶ್ಯಕತೆಯಿದೆ. ಆದ್ದರಿಂದ ಬೆಳಗಾವಿ ಮಹಾನಗರದ ಸುತ್ತಮುತ್ತ ಇರುವ ಸರಕಾರಿ ಜಾಗೆಯಲ್ಲಿ 1 ಎಕರೆಯಷ್ಟಾದರೂ ಜಾಗೆಯನ್ನು ಸಮುದಾಯ ಭವನ ನಿರ್ಮಾಣಕ್ಕೆ ಮಂಜೂರು ಮಾಡುವಂತೆ ಪದಾಧಿಕಾರಿಗಳು ಸಮಾಜದ ಪರವಾಗಿ ವಿನಂತಿಸಿದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾಂಡುರಂಗ ನಾಯಕ್, ಜಿಲ್ಲಾಧ್ಯಕ್ಷ ಎಂ.ಟಿ.ರಾಠೋಡ, ಕಾರ್ಯಾಧ್ಯಕ್ಷ ಕೃಷ್ಣಾ ರಾಠೋಡ ಸೇರಿದಂತೆ ಇತರರಿದ್ದರು.
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 