ಬಸ್ ಪುನರಾರಂಭಿಸಲು ಆಗ್ರಹಿಸಿ ಮನವಿ
ಲೋಕದರ್ಶನ ವರದಿ
ಮೂಡಲಗಿ 24: ಪ್ರತಿ ದಿನ ಮುಂಜಾನೆ 4ಗಂಟೆಗೆ ಔರಾದದಿಂದ (ಬೀದರ) ಮೂಡಲಗಿ ಮಾರ್ಗವಾಗಿ ಬೆಳಗಾವಿಗೆ ಹೋಗುವ ಬಸ್ ಬರದೆ ಇದ್ದ ಕಾರಣ ಪ್ರಯಾಣಿಕರಿಗೆ ತೊಂದರೆಯಾಗಿದೆ ಇದನು ಸರಿಪಡಿಸಬೇಕೆಂದು ಶುಭೋದಯ ಸ್ವಾಬಿಮಾನಿ ಕನ್ನಡ ಸಂರಕ್ಷಣಾ ವೇದಿಕೆಯ ಸದಸ್ಯರು ಇಂದು ಮೂಡಲಗಿ ಸಾರಿಗೆ ನಿಯಂತ್ರಣಾಧಿಕಾರಿ ಎಸ್,ಎಸ್ ಯಲಿಗಾರ ಅವರಿಗೆ ಮನವಿ ನೀಡಿದರು,
ವೇದಿಕೆಯ ಅಧ್ಯಕ್ಷ ಸುಭಾಸ ಕಡಾಡಿ ಮಾತನಾಡಿ, ಪ್ರತಿದಿನ ಹಲವಾರು ಪ್ರಯಾಣಿಕರು ಈ ಬಸನ್ನು ಅವಲಂಬಿಸಿದ್ದಾರೆ ಆದರೆ ಅಕ್ಟೋಬರ 23 ಮತ್ತು 24 ರಂದು ಎರಡು ದಿನಗಳಿಂದ ಈ ಬಸ್ ಬಾರದೆ ಜನರಿಗೆ ತೊಂದರೆಯಾದರೆ ಅದನು ಸರಿ ಪಡಿಸಲು ಮೇಲಾಧಿಕಾರಿಗೆ ಮನವಿ ನೀಡುವದು ಅವಶ್ಯವಾಗಿದೆ ಎಂದರು.
ಮೂಡಲಗಿ ತಾಲೂಕಾ ಕೇಂದ್ರವಾಗಿದರಿಂದ ಪ್ರಯಾಣಿಕರ ಸಂಖ್ಯೆ ದಿನೆ ದಿನೆ ಹೆಚ್ಚಾಗುತ್ತಿದೆ ಮತ್ತು ಕೇಲವು ಬಸಗಳು ಗುರ್ಲಾಪೂರದಿಂದ ಹೊರಮಾರ್ಗವಾಗಿ ಹೋಗುತ್ತವೆ ಇದರಿಂದ ಪರೀಕ್ಷೆಗೆ ಅಥವಾ ಸಂದರ್ಶನಕ್ಕೆ ಹಾಜರಾಗುವ ವಿಧ್ಯಾರ್ಥಿಗಳಿಗೂ ಇದರಿಂದ ತೊಂದರೆಯಾಗಿದೆ ಕೊಡಲೆ ಇದನ್ನು ಸರಿ ಪಡಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ,
ಈ ಸಮಯದಲ್ಲಿ ವೇಧಿಕೆಯ ಸದಸ್ಯರಾದ ಶಿವಬಸು ಗಾಡವಿ,ಶಿವು ಪಿರೋಜಿ,ಕೇಶವ ಎಮ್ ದೇಸಾಯಿ,ಬಾಳಯ್ಯಾ ಹಿರೇಮಠ, ರವಿ ನೇಸೂರ, ಶ್ರೀನಿವಾಸ ಗೀರೆನ್ನವರ, ಸ್ವಾಮಿ ವೀವೆಕಾನಂದ ಸಂಸ್ಥೆಯ ಅಧ್ಯಕ್ಷ ಸಂತ್ರಾಮ ನಾಶಿ ಕಾರ್ಯದರ್ಶಿ ಶಿವಾನಂದ ಮುಧೋಳ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 