ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ದಶಕದಿಂದ ಇರುವ ಹೆರಿಗೆ ವೈದನನ್ನು ಮಾತೃ ಇಲಾಖೆಗೆ ಕಳಿಸುವಂತೆ ಮನವಿ
Request to send the obstetrician who has been at the Medical College Hospital for a decade to the Ma
ಕಾರವಾರ 10 : ವೈದ್ಯಕೀಯ ವಿಜ್ಞಾನ ಸಂಸ್ಥೆ (ಕ್ರಿಮ್ಸ್)ನಿಂದ ಡಾ. ಶಿವಾನಂದ ಕುಡ್ತರಕರ ಅವರನ್ನುಬಿಡುಗಡೆ ಮಾಡಿ , ಮಾತೃ ಇಲಾಖೆಗೆ ಕಳುಹಿಸಬೇಕು ಎಂದು ಜಿಲ್ಲಾ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ರಾಘು ನಾಯ್ಕ , ಹೆಲ್ತ್ ಕಮಿಷನರ್ ಗೆ ಹಾಗೂ ಕಾರವಾರ ಕ್ರಿಮ್ಸ್ ನಿರ್ದೇಶಕರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.
ವೈದ್ಯಕೀಯ ಶಿಕ್ಷಣ ಇಲಾಖೆಯ ಮೆಡಿಕಲ್ ಕಾಲೇಜುಗಳಲ್ಲಿ ಕಳೆದ 5 ವರ್ಷ ಅಥವಾ ಅದಕ್ಕಿಂತಲೂ ಹೆಚ್ಚು ವರ್ಷಗಳಿಂದ ಕೆಲಸ ಮಾಡುತ್ತಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗಳನ್ನು ಕೂಡಲೇ ಬಿಡುಗಡೆಗೊಳಿಸಿ ಮಾತೃ ಇಲಾಖೆಗೆ ಮರಳಿಸುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಕಳೆದ 10 ವರ್ಷಗಳಿಂದ ಕಾರವಾರದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿರುವ ಮೆಡಿಕಲ್ ಕಾಲೇಜಿನಲ್ಲಿ ಡಾ. ಶಿವಾನಂದ ಕುಡ್ತರಕರ ಕೆಲಸ ಮಾಡುತ್ತ ಹೆರಿಗೆಗೆ ಬರುವ ಬಡ ಮಹಿಳೆಯರಿಂದ ಹಣ ಪಡೆಯುತ್ತಿದ್ದಾರೆ ಎಂದು ಕಮಿಷನರ್ ಗೆ ನೀಡಿದ ಮನವಿಯಲ್ಲಿ ಆರೋಪಿಸಿದ್ದಾರೆ.
ಆಡಳಿತದಲ್ಲಿ ಭ್ರಷ್ಟಾಚಾರ ನಡೆಸುತ್ತಿರುವ ಹಾಗೂ ಅಧೀನ ಸಿಬ್ಬಂದಿಗಳ ಮೇಲೆ ದೌರ್ಜನ್ಯ ನಡೆಸುತ್ತಿರುವ ಆರೋಪಗಳಿವೆ ಎಂದು ಮನವಿಲ್ಲಿ ಪ್ರಸ್ತಾಪಿಸಿದ್ದಾರೆ. ಕೂಡಲೇ ಡಾ. ಶಿವಾನಂದ ಅವರನ್ನು ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯಿಂದ ಬಿಡುಗಡೆ ಮಾಡಬೇಕು. ಇಲ್ಲದ ಪಕ್ಷದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 