ಅಬಕಾರಿ ಇಲಾಖೆಗೆ ಸ್ವಂತ ಕಟ್ಟಡ ನಿರ್ಮಿಸಲು ಕೊಡುವಂತೆ ಸಚಿವರಿಗೆ ಮನವಿ
Request to the Minister to allow the Excise Department to construct its own building
ಬ್ಯಾಡಗಿ 08: ರಾಜ್ಯದಲ್ಲಿ ಸರ್ಕಾರಕ್ಕೆ ಅತಿಹೆಚ್ಚು ಆದಾಯ ನೀಡುವ ಅಬಕಾರಿ ಇಲಾಖೆಗೆ ಸ್ವಂತ ಕಟ್ಟಡ ನೀಡುವಂತೆ ಭ್ರಷ್ಟಾಚಾರ ವಿರೋಧಿ ಜನ ಆಂದೋಲನ ನ್ಯಾಸ ರಾಜ್ಯ ಸಂಚಾಲಕರು ಎಂ ಡಿ ಚಿಕ್ಕಣ್ಣನವರ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ್ ಅವರಿಗೆ ಮನವಿಪತ್ರ ನೀಡಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದವರು ರಾಜ್ಯದಲ್ಲಿ ಅಬಕಾರಿ ಇಲಾಖೆಯಿಂದ ಅತೀ ಹೆಚ್ಚು ಆದಾಯ ನೀಡುವಂತೆಯಾಗಿದ್ದು ಹಲವು ಜಿಲ್ಲೆಗಳಲ್ಲಿ ಅಬಕಾರಿ ಇಲಾಖೆಗೆ ಸ್ವಂತ ಕಟ್ಟಡಗಳು ಇರುವುದಿಲ್ಲ ಅವರು ಬಾಡಿಗೆ ಕಟ್ಟಡದನ್ನು ಪಡೆದು ತಮ್ಮ ಕಾರ್ಯ ಚಟುವಟಿಕೆಗಳನ್ನು ಮಾಡುತ್ತಿದ್ದಾರೆ ಮತ್ತು ಬಾಡಿಗೆ ಪಡೆದ ಕಟ್ಟಡಗಳಲ್ಲಿ ಮೂಲ ಸೌಕರ್ಯಗಳಿಲ್ಲದಿರುವುದು ವಿಷಾಧನಿಯ ಸಂಗತಿ ಇದರಿಂದ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿಗಳು ಕಟ್ಟಡದ ಬಾಡಿಗೆಗೆ ಪಾತಿಯಾಗುತ್ತೇವೆ ಕೂಡಲೇ ಮಾನ್ಯ ಸಚಿವರು ತಮ್ಮ ಅವಧಿಯಲ್ಲಿಯೇ ರಾಜ್ಯದಲ್ಲಿ ಹಾಗೂ ತಾಲೂಕುಗಳಲ್ಲಿ ಅಬಕಾರಿ ಇಲಾಖೆಗಳಿಗೆ ಸ್ವಂತ ಕಟ್ಟಡಗಳನ್ನು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಈ ವೇಳೆ ಶಾಸಕ ಬಸವರಾಜ ಶಿವಣ್ಣನವರ.ಅಬಕಾರಿ ಗುತ್ತಿಗೆದಾರ ಆರ್ ನಾಗರಾಜ್.ಚನ್ನಬಸಪ್ಪ ಹುಲ್ಲತ್ತಿ.ಸುಭಾಷ ಮಾಳಗಿ ಹಾಗೂ ಅನೇಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 