ಬೈಲಹೊಂಗಲ: ಮುಖ್ಯಶಿಕ್ಷಕರನ್ನು ನೇಮಕ ಮಾಡಬೇಕು ಒತ್ತಾಯಿಸಿ ಮನವಿ
ಲೋಕದರ್ಶನ ವರದಿ
ಬೈಲಹೊಂಗಲ 12: ಪಟ್ಟಣದ ಬಸವೇಶ್ವರ ಆಶ್ರಯ ಕಾಲೂನಿಯಲ್ಲಿರುವ ಸಕರ್ಾರಿ ಹಿರಿಯ ಪ್ರಾಥಮಿಕ ಶಾಲೆ ನಂ.8ರ ಮುಖ್ಯಶಿಕ್ಷಕರು ಶಾಲೆಗೆ ಚಕ್ಕರ ಹಾಕಿ ರಾಜಕೀಯ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಅವರನ್ನು ತಕ್ಷಣವೇ ವಗರ್ಾವಣೆ ಮಾಡಿ ಬೇರೆ ಮುಖ್ಯಶಿಕ್ಷಕರನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿ ಶಾಲೆಯ ಸಲಹಾ ಸಮಿತಿ ಸದಸ್ಯರುಗಳು, ಪಾಲಕರು ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ದಿ.10ರಂದು ಮನವಿ ಸಲ್ಲಿಸಿದರು.
ಮುಖ್ಯ ಶಿಕ್ಷಕರಾಗಿರುವ ಬಿ.ಬಿ.ಬಸಕ್ರಿ ಅವರು ತಮ್ಮ ಕರ್ತವ್ಯದ ಜವಾಬ್ದಾರಿ ಮರೆತು ವರ್ತನೆ ಮಾಡುತ್ತಿದ್ದಾರೆ. ಶಿಕ್ಷಕ ವೃತ್ತಿಗೆ ಅಪಮಾನ ಮಾಡುವ ರೀತಿಯಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಅವರನ್ನು ತಕ್ಷಣ ವಗರ್ಾವಣೆಗೊಳಿಸಿ ಬೇರೆ ಮುಖ್ಯಶಿಕ್ಷಕರನ್ನು ನೇಮಕಗೊಳಿಸಬೇಕು.
ಮಕ್ಕಳ ಉಜ್ವಲ ಭವಿಷ್ಯತ್ತಿನ ಬಗ್ಗೆ ಹೆಚ್ಚಿನ ಚಿಂತನೆ ಮಾಡಿ ಶಾಲೆಯ ಶಿಕ್ಷಣದ ಗುಣಮಟ್ಟ, ಶಾಲೆ ಸುಧಾರಣೆ ಬಗ್ಗೆ ಹೆಚ್ಚಿನ ರೀತಿಯಲ್ಲಿ ಕಾಳಜಿವಹಿಸುವ ಮುಖ್ಯಶಿಕ್ಷಕರನ್ನು ನೇಮಕಗೊಳಿಸಬೇಕು. ಇಲ್ಲವಾದರೆ ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಎಸ್ಡಿಎಂಸಿ ಅಧ್ಯಕ್ಷ ಪುಂಡಲೀಕ ತಿಮ್ಮಾಪೂರ, ದುಗರ್ಾ ಯರಜವರ್ಿ, ಕಿರಣ ಬೆಳಗಾವಿಮಠ, ರಾಜು ತಳವಾರ, ಆನಂದ ಹೊಂಗಲ, ದಶರಥ ಮ್ಯಾಗೇರಿ, ನಿಖಿಲ ಅಡಕಿ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 