ಬಾವಿಗೆ ಬಿದ್ದ ಕಪ್ಪು ಚಿರತೆಯ ರಕ್ಷಣೆ
Rescue of a black leopard that fell into a well
ಬ್ರಹ್ಮಾವರ: ತಾಲ್ಲೂಕಿನ ಆರೂರು ಗ್ರಾಮದಲ್ಲಿ ಕೋಳಿಯೊಂದನ್ನು ಅಟ್ಟಿಸಿಕೊಂಡು ಹೋಗಿ ಬಾವಿಗೆ ಬಿದ್ದಿದ್ದ ಕಪ್ಪು ಚಿರತೆಯನ್ನು ರಕ್ಷಣೆ ಮಾಡಲಾಗಿದೆ. ಭಾನುವಾರ ರಾತ್ರಿ ಕೋಳಿಯನ್ನು ಅಟ್ಟಿಸಿಕೊಂಡು ಹೋದ ಚಿರತೆ ಗ್ರಾಮದ ಅಡ್ಜೀಲ್ನ ಶಂಕರ ಪೂಜಾರಿ ಅವರ ಆವರಣವಿಲ್ಲದ ಬಾವಿಗೆ ಬಾವಿಗೆ ಬಿದ್ದಿದೆ. ಮನೆಯವರು ಈ ವಿಷಯವನ್ನು ತಕ್ಷಣ ಪಂಚಾಯಿತಿ ಅಧ್ಯಕ್ಷ ಗುರುರಾಜ ರಾವ್ ಅವರಿಗೆ ತಿಳಿಸಿದ್ದು, ಅವರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸೋಮವಾರ ಬೆಳಿಗ್ಗೆ ಬಂದ ಅಧಿಕಾರಿಗಳು, ಬಾವಿಯೊಳಗೆ ಪಂಜರವನ್ನು ಇಳಿಸಿ ಚಿರತೆಯನ್ನು ಮೇಲಕ್ಕೆತ್ತಿ, ಕುದುರೆಮುಖ ಅಭಯಾರಣ್ಯಕ್ಕೆ ಬಿಟ್ಟಿದ್ದಾರೆ.
ಪಶ್ಚಿಮ ಘಟ್ಟದ ಕಾಡುಗಳಲ್ಲಿ ಹೆಚ್ಚಾಗಿ ಕಾಣಸಿಗುವ ಕಪ್ಪು ಚಿರತೆ, ಉಡುಪಿ ಜಿಲ್ಲೆಯಲ್ಲಿ ಕಾಣಸಿಗುವುದು ಅಪರೂಪ. ಬಾವಿಗೆ ಬಿದ್ದಿದ್ದ ಗಂಡು ಚಿರತೆ ಸುಮಾರು ಮೂರು ವರ್ಷದ್ದಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ನಾಲ್ಕೈದು ತಿಂಗಳುಗಳಿಂದ ಕಪ್ಪು ಚಿರತೆ ಆರೂರು ಗ್ರಾಮದಲ್ಲಿ ಸಂಚರಿಸುತ್ತಿದ್ದು, ಕೆಲವರ ನಾಯಿಗಳನ್ನು ಹೊತ್ತೊಯ್ದಿದಿದೆ. ಇದರಿಂದ ಜನರು ಭಯಭೀತರಾಗಿದ್ದರು. ಚಿರತೆ ಸೆರೆ ಹಿಡಿದ ಮೇಲೆ ನೆಮ್ಮದಿಯಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪ ಅರಣ್ಯಾಧಿಕಾರಿ ವಾಸೀಂ ಶೇಖ್, ಗಾರ್ಡ್ಗಳಾದ ರಮೇಶ್, ಶ್ರೀನಿವಾಸ, ರಾಮಚಂದ್ರ ಮತ್ತು ಪ್ರವೀಣ್ ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 