ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೃದ್ಧನ ರಕ್ಷಣೆ
Rescue of an elderly man who was attempting suicide
ಕೊಲ್ಹಾರ 14: ಸೇತುವೆ ಮೇಲಿನಿಂದ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೃದ್ಧನನ್ನು ರಕ್ಷಣೆ ಮಾಡಿದ ಘಟನೆ ಶುಕ್ರವಾರ ಸಂಜೆ ಕೊಲ್ಹಾರ ಸೇತುವೆ ಮೇಲೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಯತ್ನಟ್ಟಿ ಗ್ರಾಮದ ಸಿದ್ದಪ್ಪ ಕರಿಗಾರ ಎಂಬಾತ ಜೀವನದಲ್ಲಿ ಜಿಗುಪ್ಸೆಗೊಂಡು ಸೇತುವೆ ಮೇಲಿನಿಂದ ಕೃಷ್ಣ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಿರುವುದನ್ನು ನೋಡಿದ ಈರಣ್ಣ ಬಾಗಿ ಆ ವೃದ್ಧ ಮುದುಕನನ್ನು ಓಡಿ ಹೋಗಿ ರಕ್ಷಿಸಿದ್ದಾನೆ. ನಂತರ ಈರಣ್ಣ ಸ್ಥಳೀಯ ಕೊಲ್ಹಾರ ಪೋಲಿಸ ಠಾಣೆಗೆ ಪೋನ್ ಮಾಡಿ ಮಾಹಿತಿ ತಿಳಿಸಿ ತನ್ನ ಕಾರಿನಲ್ಲಿಯೇ ಆ ವೃದ್ಧನನ್ನು ಕರೆದುಕೊಂಡು ಹೋಗಿ ಪೋಲಿಸ್ ಠಾಣೆಗೆ ಒಪ್ಪಿಸಿದ್ದಾನೆ. ವೃದ್ಧನನ್ನು ಪೋಲಿಸರು ವಿಚಾರಣೆ ನಡೆಸಿದ್ದಾರೆ.
ಪಿಎಸ್ಐ ಅಶೋಕ ನಾಯಕ ಈರಣ್ಣ ಬಾಗಿ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ವೃದ್ಧನ ರಕ್ಷಣೆಗೆ ಮುಂದಾದ ಪ್ರತ್ಯಕ್ಷದರ್ಶಿ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 