ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೃದ್ಧನ ರಕ್ಷಣೆ
Rescue of an elderly man who was attempting suicide
ಕೊಲ್ಹಾರ 14: ಸೇತುವೆ ಮೇಲಿನಿಂದ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೃದ್ಧನನ್ನು ರಕ್ಷಣೆ ಮಾಡಿದ ಘಟನೆ ಶುಕ್ರವಾರ ಸಂಜೆ ಕೊಲ್ಹಾರ ಸೇತುವೆ ಮೇಲೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಯತ್ನಟ್ಟಿ ಗ್ರಾಮದ ಸಿದ್ದಪ್ಪ ಕರಿಗಾರ ಎಂಬಾತ ಜೀವನದಲ್ಲಿ ಜಿಗುಪ್ಸೆಗೊಂಡು ಸೇತುವೆ ಮೇಲಿನಿಂದ ಕೃಷ್ಣ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಿರುವುದನ್ನು ನೋಡಿದ ಈರಣ್ಣ ಬಾಗಿ ಆ ವೃದ್ಧ ಮುದುಕನನ್ನು ಓಡಿ ಹೋಗಿ ರಕ್ಷಿಸಿದ್ದಾನೆ. ನಂತರ ಈರಣ್ಣ ಸ್ಥಳೀಯ ಕೊಲ್ಹಾರ ಪೋಲಿಸ ಠಾಣೆಗೆ ಪೋನ್ ಮಾಡಿ ಮಾಹಿತಿ ತಿಳಿಸಿ ತನ್ನ ಕಾರಿನಲ್ಲಿಯೇ ಆ ವೃದ್ಧನನ್ನು ಕರೆದುಕೊಂಡು ಹೋಗಿ ಪೋಲಿಸ್ ಠಾಣೆಗೆ ಒಪ್ಪಿಸಿದ್ದಾನೆ. ವೃದ್ಧನನ್ನು ಪೋಲಿಸರು ವಿಚಾರಣೆ ನಡೆಸಿದ್ದಾರೆ.
ಪಿಎಸ್ಐ ಅಶೋಕ ನಾಯಕ ಈರಣ್ಣ ಬಾಗಿ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ವೃದ್ಧನ ರಕ್ಷಣೆಗೆ ಮುಂದಾದ ಪ್ರತ್ಯಕ್ಷದರ್ಶಿ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 