ಪರಿಶಿಷ್ಟರ ಮೀಸಲು ವಿಚಾರ : ಮಧ್ಯಪ್ರವೇಶಕ್ಕೆ ಸಂಸದರ ಒಕ್ಕೊರಲ ಆಗ್ರಹ
ನವದೆಹಲಿ, ಫೆ 10 : ಪರಿಶಿಷ್ಟ ಜಾತಿ, ವರ್ಗಗಳ ಉದ್ಯೋಗ ಮತ್ತು ಬಡ್ತಿ ವಿಚಾರದಲ್ಲಿ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರ ಮೇಲ್ಮನವಿ ಸಲ್ಲಿಸಬೇಕು ಎಂದು ಲೋಕಜನಶಕ್ತಿ ಮುಖಂಡ, ಸಂಸದ ಚಿರಾಗ್ ಪಾಸ್ವಾನ್ ಲೋಕಸಭೆಯಲ್ಲಿ ಆಗ್ರಹಿಸಿದ್ದಾರೆ.
ಅಧಿವೇಶನದಲ್ಲಿ ಪಾಲ್ಗೊಂಡ ಅವರು ಈ ತೀರ್ಪಿಗೆ ಪಕ್ಷದ ಸಹಮತ ಇಲ್ಲ ಆದ್ದರಿಂದ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಪರಿಹರಿಸಲು ಮುಂದಾಗಬೇಕು ಎಂದರು.
ಇದಕ್ಕೆ ಅನೇಕ ವಿರೋಧಿ ಸದಸ್ಯರು ಬೆಂಬಲ ವ್ಯಕ್ತಪಡಿಸಿ ಸರ್ಕಾರ ಹಿಂದುಳಿದವರು, ಪರಿಶಿಷ್ಟರ ವಿಚಾರದಲ್ಲಿ ತಾರತಮ್ಯ, ಮೌನವಹಿಸುವುದು ತರವಲ್ಲ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.
ಬಿಜೆಪಿ ನೇತೃತ್ವದ ಎನ್ ಡಿಎ ಅಂಗಪಕ್ಷವಾಗಿರುವ ಅಪ್ನಾ ದಳ್ ಸಂಸದೆ ಅನುಪ್ರಿಯ ಪಟೇಲ್ ಇದಕ್ಕೆ ಸಹಮತ ವ್ಯಕ್ತಪಡಿಸಿ ಪರಿಶಿಷ್ಟರ ವಿಚಾರದಲ್ಲಿ ಸುಪ್ರಿಂಕೋರ್ಟ್ ಇಂತಹ ತೀರ್ಪು ನೀಡಿರುವುದು ನಿಜಕ್ಕೂ ದುರದೃಷ್ಟಕರ ಮತ್ತು ನೋವಿನ ಸಂಗತಿ ಎಂದು ವಿಷಾದಿಸಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 