ಪರಿಶಿಷ್ಟರ ಮೀಸಲು ವಿಚಾರ : ಮಧ್ಯಪ್ರವೇಶಕ್ಕೆ ಸಂಸದರ ಒಕ್ಕೊರಲ ಆಗ್ರಹ
ನವದೆಹಲಿ, ಫೆ 10 : ಪರಿಶಿಷ್ಟ ಜಾತಿ, ವರ್ಗಗಳ ಉದ್ಯೋಗ ಮತ್ತು ಬಡ್ತಿ ವಿಚಾರದಲ್ಲಿ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರ ಮೇಲ್ಮನವಿ ಸಲ್ಲಿಸಬೇಕು ಎಂದು ಲೋಕಜನಶಕ್ತಿ ಮುಖಂಡ, ಸಂಸದ ಚಿರಾಗ್ ಪಾಸ್ವಾನ್ ಲೋಕಸಭೆಯಲ್ಲಿ ಆಗ್ರಹಿಸಿದ್ದಾರೆ.
ಅಧಿವೇಶನದಲ್ಲಿ ಪಾಲ್ಗೊಂಡ ಅವರು ಈ ತೀರ್ಪಿಗೆ ಪಕ್ಷದ ಸಹಮತ ಇಲ್ಲ ಆದ್ದರಿಂದ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಪರಿಹರಿಸಲು ಮುಂದಾಗಬೇಕು ಎಂದರು.
ಇದಕ್ಕೆ ಅನೇಕ ವಿರೋಧಿ ಸದಸ್ಯರು ಬೆಂಬಲ ವ್ಯಕ್ತಪಡಿಸಿ ಸರ್ಕಾರ ಹಿಂದುಳಿದವರು, ಪರಿಶಿಷ್ಟರ ವಿಚಾರದಲ್ಲಿ ತಾರತಮ್ಯ, ಮೌನವಹಿಸುವುದು ತರವಲ್ಲ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.
ಬಿಜೆಪಿ ನೇತೃತ್ವದ ಎನ್ ಡಿಎ ಅಂಗಪಕ್ಷವಾಗಿರುವ ಅಪ್ನಾ ದಳ್ ಸಂಸದೆ ಅನುಪ್ರಿಯ ಪಟೇಲ್ ಇದಕ್ಕೆ ಸಹಮತ ವ್ಯಕ್ತಪಡಿಸಿ ಪರಿಶಿಷ್ಟರ ವಿಚಾರದಲ್ಲಿ ಸುಪ್ರಿಂಕೋರ್ಟ್ ಇಂತಹ ತೀರ್ಪು ನೀಡಿರುವುದು ನಿಜಕ್ಕೂ ದುರದೃಷ್ಟಕರ ಮತ್ತು ನೋವಿನ ಸಂಗತಿ ಎಂದು ವಿಷಾದಿಸಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 