ಪ್ರಧಾನಮಂತ್ರಿ ಪೋಷಣ್ ಅಭಿಯಾನ ಕಾರ್ಯಕ್ರಮಕ್ಕೆ ರೇಷ್ಮಾ ಭಾನು ಚಾಲನೆ
Reshma Bhanu drives for Pradhanmantri Poshan Abhiyan program
ಪ್ರಧಾನಮಂತ್ರಿ ಪೋಷಣ್ ಅಭಿಯಾನ ಕಾರ್ಯಕ್ರಮಕ್ಕೆ ರೇಷ್ಮಾ ಭಾನು ಚಾಲನೆ
ರಾಣೇಬೆನ್ನೂರು 5: ಕೊಪ್ಪಳ ಜಿಲ್ಲೆಯ ನಗರಾಭಿವೃದ್ಧಿಯೋಜನಾಧಿಕಾರಿ, ರಾಣೇಬೆನ್ನೂರು ತಾಲ್ಲೂಕಿನ ನೋಡಲ್ ಅಧಿಕಾರಿಯಾದ ರೇಷ್ಮಾಭಾನು ಹಾನಗಲ್ ಅವರು ಅನೀರೀಕ್ಷಿತವಾಗಿ ಮಾರುತಿ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ನಂ 17 ಶಾಲೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಪೋಷಣ್ ಅಭಿಯಾನ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳಿಗೆ ಬಾಳೆಹಣ್ಣು ವಿತರಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಶಾಲೆಯಲ್ಲಿ ಬಿಸಿಯೂಟದ ಜೊತೆಗೆಕೊಡುವ ಹಾಲು,ರಾಗಿ ಮಾಲ್ಟ್, ಮೊಟ್ಟೆ, ಬಾಳೆಹಣ್ಣು ಮತ್ತು ಪೌಷ್ಟಿಕ ಆಹಾರಗಳನ್ನು ಸೇವಿಸಿ ಆರೋಗ್ಯವಂತರಾಗಿ, ಗುಣಾತ್ಮಕ ಶಿಕ್ಷಣ ಪಡೆಯಲು ಮುಂದಾಗಬೇಕು ಎಂದು ಕರೆ ನೀಡಿದರು.
ಶಿಕ್ಷಕರು ಪಾಲಕರು ಮತ್ತು ಸಮಾಜ ಒಂದಾಗಿ ಒಗ್ಗಟ್ಟಾಗಿ ಸಂಕಲ್ಪಿತ ಉದ್ದೇಶವನ್ನು ಮಕ್ಕಳ ಪರಿಪೂರ್ಣ ಶಿಕ್ಷಣದ ಕಡೆ ಗಮನಹರಿಸಿದಾಗ ಮಾತ್ರ ಪ್ರತಿಯೊಬ್ಬರು, ಪ್ರತಿಭಾವಂತ ವಿದ್ಯಾರ್ಥಿಗಳಾಗಲು ಸಾಧ್ಯವಾಗುವುದು ಎಂದರು.ತಾಲೂಕ ತಹಶೀಲ್ದಾರ ಆರ್. ಹೆಚ್. ಭಾಗವಾನ, ತಾಲೂಕ ದೈಹಿಕ ಶಿಕ್ಷಣ ಅಧೀಕ್ಷಕ ಪ್ರಭಾಕರ್ ಚಂದಿ, ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯ ರಮೇಶ ಕಾಳಿ, ಎಸ್.ಡಿ. ಎಂ.ಸಿ. ಅಧ್ಯಕ್ಷ ಆನಂದ ಚಿನ್ನಿಕಟ್ಟಿ, ಶಾಲಾ ಮುಖ್ಯೋಪಾಧ್ಯಾಯ, ಬಿ. ಪಿ.ಶಿಡೇನೂರ, ಪಾಲಕ ನಾಗರಾಜ ಕೋಳೂರ , ಸೇರಿದಂತೆ ಶಾಲಾ ಶಿಕ್ಷಕರು ಸಿಬ್ಬಂದಿ ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 