ಕೋಡಿಯಾಲ ಹೊಸಪೇಟೆ ಗ್ರಾಮಕ್ಕೆ ಸಂಪನ್ಮೂಲ ಅಧಿಕಾರಿಗಳ ಭೇಟಿ
ಲೋಕದರ್ಶನವರದಿ
ರಾಣೇಬೆನ್ನೂರು10: ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನು ತಾಲೂಕಿನ ಕೊಡಿಯಾಲ ಹೊಸಪೇಟೆ ಮತ್ತು ಕವಲೆತ್ತು ಗ್ರಾಮಗಳಲ್ಲಿ ಗುರುವಾರ ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳು ನಡೆಸಿದರು.
ಈ ಎರಡು ಗ್ರಾಮಗಳಲ್ಲಿ ಇಟ್ಟಿಗೆ ಬಟ್ಟಿಯಲ್ಲಿ ಕೆಲಸ ಮಾಡುತ್ತಿರುವವರ ಮಕ್ಕಳು ಶಾಲೆಯಿಂದ ಹೊರಗುಳಿಯುತ್ತಿರುವುದು ಸಾಮಾನ್ಯವಾಗಿದ್ದು, ಈ ಹಿನ್ನಲೆಯಲ್ಲಿ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಶಿವರಾಜ ಶಿಮಿಕೇರಿ ಹಾಗೂ ಶಿಕ್ಷಕರು ಸಮೀಕ್ಷೆ ನಡೆಸಿದರು.
ಈ ವೇಳೆ ಜಿಪಂ ಸದಸ್ಯೆ ಮಂಗಳಗೌರಿ ಪೂಜಾರ ಮಾತನಾಡಿ, ಬಿಜಾಪುರ, ರಾಯಚೂರ, ಬಾಗಲಕೋಟೆ ಮತ್ತು ಹಾವೇರಿ ತಾಲುಕಿನ ವಿವಿಧ ಲಮಾಣಿ ತಾಂಡಾಗಳ ಜನರು ಇಟ್ಟಿಗೆ ಬಟ್ಟಿಯಲ್ಲಿ ಕೆಲಸ ಮಾಡಲು ಆಗಮಿಸಿದ್ದು, ಈ ಸಂದರ್ಭದಲ್ಲಿ ಅವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಶಿಕ್ಷಣ ಇಲಾಖೆ ಸಮೀಕ್ಷೆ ನಡೆಸಿ ಸ್ಥಳೀಯ ಶಾಲೆಗಳಲ್ಲಿ ತಾತ್ಕಾಲಿಕ ನೊಂದಣಿ ಮಾಡಿಕೊಂಡು ಶಿಕ್ಷಣ ನೀಡುತ್ತಿದೆ, ಇದರ ಪ್ರಯೋಜನವನ್ನು ನೀವು ಪಡದುಕೊಳ್ಳಬೇಕು ಎಂದರು.ಆರ್ಪಿ ಅಶೋಕ ಬಿ.ಕೆ, ಮುಖ್ಯಶಿಕ್ಷಕ ಮಲ್ಲಿಕಾಜರ್ುನ ಬಾವಿಕಟ್ಟಿ, ಶ್ರೀನಿವಾಸ ರಾಯಚೂರ, ಹನುಮಂತಪ್ಪ, ರೇಖಾ, ಜಗದೀಶ ಲಮಾಣಿ, ರೇಣುಕಾ, ಸೂರಲಿಂಗಯ್ಯ, ಬೀರಪ್ಪ ಆರೇರ, ಫಕ್ಕೀರಪ್ಪ ಜಾಡರ, ಮಹಾಂತೇಶ ಸೇರಿದಂತೆ ಮತ್ತಿತರರು ಇದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 