ಅವಳಿ ನಗರದ ಸಮಸ್ಯೆಗಳಿಗೆ ಸ್ಪಂದಿಸುವೆ: ಮಹಾಪೌರ ಜ್ಯೋತಿ ಪಾಟೀಲ
Responding to the problems of the twin cities: Mayor Jyoti Patil
ಧಾರವಾಡ ಜುಲೈ 19: ಹುಬ್ಬಳ್ಳಿ-ಧಾರವಾಡ ಮಹಾನಗರ ಸಭೆ ಮಹಾಪೌರರಾದ ಶ್ರೀಮತಿ. ಜ್ಯೋತಿ ಪಾಟೀಲ ಅವರನ್ನು ಧಾರವಾಡ ಮಾಳಮಡ್ಡಿ ಗೌಳಿಗಲ್ಲಿ ಶ್ರೀ ಬಾಲ ಮಾರುತಿ ದೇವಸ್ಥಾನದ ಆಡಳಿತ ಮಂಡಳಿಯಿಂದ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಮಹಾಪೌರರು, ಅವಳಿ ನಗರ ಬೆಂಗಳೂರು ನಂತರ ಎರಡನೇ ದೊಡ್ಡನಗರವಾಗಿದೆ. ಸಾರ್ವಜನಿಕರು ಸಮಸ್ಯೆಗಳಿಗೆ ತೀವ್ರವಾಗಿ ಸ್ಪಂದಿಸುವೆ. ಕಳೆದ 3-4 ವರ್ಷಗಳಲ್ಲಿ ಚಿಕ್ಕ ಚಿಕ್ಕ ಓಣಿಗಳಲ್ಲಿ ರಸ್ತೆ, ಬ್ರಿಡ್ಜ ನಿರ್ಮಿಸಿ ಸುಧಾರಣೆ ಮಾಡಲಾಗಿದೆ. ಇನ್ನು ಮುಂದೆಯೂ ತಮ್ಮ ಸಹಾಯ, ಸಹಕಾರ ಇರಲಿ. ಮಹಾನಗರ ಪಾಲಿಕೆ ತಮ್ಮ ಕೆಲಸ ಮಾಡಿಕೊಡಲಿದೆ ಎಂದು ಅವರು ತಿಳಿಸಿದರು.
ಸನ್ಮಾನದಲ್ಲಿ ಶ್ರೀ. ವಿನಯ ಪಾಟೀಲ ಅವರನ್ನು ಸನ್ಮಾನಿಸಲಾಯಿತು. ಸಮಿತಿ ಅಧ್ಯಕ್ಷರಾದ ಶ್ರೀ ಸದಾಶಿವ ಘಂಟಿ, ಕಾರ್ಯದರ್ಶಿ ಶ್ರೀ ದಾಂಡೇವಾಲೆ, ಶ್ರೀ ಪ್ರಕಾಶ ಸುಣಗಾರ, ಶ್ರೀ. ರಾಕೇಶ ಕಲಾದಗಿ, ರಾಜು ಪೈಲ್ವಾನವಾಲೆ, ಶ್ರೀಮತಿ ಶೋಭಾ ಸೇಬಣ್ಣನವರ ಸೇರಿದಂತೆ ಸಮಿತಿ ಸದಸ್ಯರು ಪದಾಧಿಕಾರಿಗಳು, ಗುರು ಹಿರಿಯರು ಭಾಗವಹಿಸಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 