ನಿವೃತ್ತ ಸೈನಿಕನಿಗೆ ಮಾಜಿ ಸೈನಿಕರ ಸಂಘದಿಂದ ಸನ್ಮಾನ
Retired soldier honored by Ex-Servicemen's Association
ನೇಸರಗಿ, 04 ; ಇಂದಿನ ಯುವಕರು ಸೈನಿಕ ಸೇವೆ ಸಲ್ಲಿಸಲು ಹಿಂದೇಟು ಹಾಕದೆ ಮನೆಗೊಬ್ಬರು ಸೈನ್ಯಕ್ಕೆ ಸೇರಬೇಕೆಂದು ನಿವೃತ್ತ ಮುಖ್ಯೋಪಾಧ್ಯಾಯ ಎಂ.ಡಿ.ನಂದೆನ್ನವರ ಹೇಳಿದರು.
ಸಮೀಪದ ದೇಶನೂರಿನ ಬಾವಿ ಬಸವೇಶ್ವರ ದೇವಸ್ಥಾನದಲ್ಲಿ ಮೂವತ್ತು ವರ್ಷಗಳ ಕಾಲ ಸೈನ್ಯದಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ರುದ್ರ್ಪ ಬಸಪ್ಪ ಕೊತ್ತಲ ಇವರನ್ನು ದೇಶನೂರಿನ ಮಾಜಿ ಸೈನಿಕರ ಸಂಘ ಸನ್ಮಾನಿಸಿ ಮಾತನಾಡಿ, ಸೈನಿಕ ಸೇವೆ ಸಲ್ಲಿಸುವ ಪ್ರತಿಯೊಬ್ಬರು ದೇಶಕ್ಕಾಗಿ ಉತ್ತಮ ಕೊಡುಗೆ ನೀಡುತ್ತಾರೆ. ಅವರ ಸೇವೆ ಶ್ಲಾಘನೀಯವೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮಲ್ಲಪ್ಪ ಕೇದಾರಿ, ಉಪಾಧ್ಯಕ್ಷ ಬಸವರಾಜ ಕಮತಗಿ, ಕಾರ್ಯದರ್ಶಿ ಸೋಮಲಿಂಗ ಕೋಟಗಿ, ಖಜಾಂಚಿ ಭಾವೆಪ್ಪ ಕೊತ್ತಲ, ಗ್ರಾಮ ಪಂಚಾಯತ್ ಅಧ್ಯಕ್ಷೆ ಸುರೇಖಾ ಕೇದಾರಿ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಸವರಾಜ ಕೇದಾರಿ, ಗ್ರಾ. ಪಂ. ಮಾಜಿ ಅಧ್ಯಕ್ಷ ದೀಪಕ್ಗೌಡ್ರು ಪಾಟೀಲ್, ಡಾ.ಎಂ.ಆರ್.ಮುಲ್ಲಾ, ಮಲ್ಲಿಕಾರ್ಜುನ ಕೊತ್ತಲ್, ನೇಸರಗಿ ಪಿಎಸ್ಐ ಈರ್ಪ ರಿತ್ತಿ, ಮಾಜಿ ಸೈನಿಕರ ಸಂಘದ ಕುಟುಂಬದವರು ಉಪಸ್ಥಿತರಿದ್ದರು. ನಾಗರಾಜ್ ಮುಚ್ಚಂಡಿ ಸ್ವಾಗತಿಸಿದರು. ಚಂದ್ರಶೇಖರ ಪೂಜಾರಿ ನಿರೂಪಿಸಿದರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 