ವೃತ್ತಿಯಿಂದ ನಿವೃತ್ತಿ ಅನಿವಾರ್ಯ: ಜಹಗಿರ್ದಾರ
Retirement from profession inevitable: Jahagirdara
ಧಾರವಾಡ 02: ವೃತ್ತಿಯಿಂದ ನಿವೃತ್ತಿ ಅನಿವಾರ್ಯ, ನಿವೃತ್ತಿಯವರೆಗೆ ದುಡಿಮೆ ಅನಿವಾರ್ಯ, ಡಾ. ನಾಗರಾಜ ಗುದಗನವರ ನಿಷ್ಠೆ ಮತ್ತು ಪ್ರೀತಿಯಿಂದ ನಿಸ್ವಾರ್ಥ ಸೇವೆಯನ್ನು ನಮ್ಮ ಸಂಸ್ಥೆಗೆ ನೀಡಿದ್ದಾರೆ. ಅವರಿಗೆ ನಿವೃತ್ತಿ ಜೀವನದಲ್ಲಿ ದೇವರು ಆರೋಗ್ಯ ಮತ್ತು ನೆಮ್ಮದಿಯನ್ನು ನೀಡಲಿ ಎಂದು ಅಂಜುಮನ್ ಏ ಸಂಸ್ಥೆಯ ಉಪಾಧ್ಯಕ್ಷ ಬಶೀರ್ ಅಹ್ಮದ್ ಎ ಜಹಗಿರ್ದಾರ ಶುಭ ಹಾರೈಸಿದರು.
ಅಂಜುಮನ್ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಸಮಾರಂಭದಲ್ಲಿ ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ನಾಗರಾಜ ಗುದಗನವರ ಮತ್ತು ಹೆಚ್ ಕೆ ನಾಯಕವಾಡಿ ಜುಲೈ 31ರಂದು ಸೇವಾ ನಿವೃತ್ತಿರಾದ ನಿಮಿತ್ಯ ಅಂಜುಮನ್ ಸಂಸ್ಥೆ ವತಿಯಿಂದ ಸನ್ಮಾನಿಸಿ ಮಾತನಾಡಿ ಅವರಿಬ್ಬರ ಸೇವೆ ಗಮನಾರ್ವಾಗಿದೆ ಎಂದು ಶ್ಲಾಘಿಸಿದರು.
ಪ್ರಾಚಾರ್ಯ ಡಾ. ಐ ಎ ಮುಲ್ಲಾ ಮುಂದಿನ ಜೀವನ ನೆಮ್ಮದಿಯಿಂದ ಕೂಡಿರಲಿ ಎಂದು ಹೇಳಿದರು. ಡಾ. ಎ ಎಸ್ ಬಳ್ಳಾರಿ, ಡಾ. ರುದ್ರೇಶ್ ಮೇಟಿ, ಪ್ರೊ.ನಾಗರಾಜ ಕನಕಣಿ, ರಜಿಯಾ ತಹಸೀಲ್ದಾರ್ ಅವರು ಸೇವಾ ನಿವೃತ್ತಿಯೊಂದಿಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಕಾಲೇಜಿನ ಆಡಳಿತ ಮಂಡಳಿಯ ರಫೀಕ ಶಿರಹಟ್ಟಿ, ಕೈರುದ್ದೀನ್ ಶೇಕ್, ಅಬ್ದುಲ್ ಅಜೀಜ್ ಬಡ್ಬಡೇ, ನನ್ನೇ ಸಾಬಣ್ಣವರ್, ಖಲಿಲ ದಾಸನಕೊಪ್, ಡಾ ಶಿವಾನಂದ ಶೆಟ್ಟರ್, ಪ್ರೊ. ಡಿ ಎಮ್ ನಿಡವನಿ, ಡಾ ಎನ್ ಎಮ್ ಮಕಂದಾರ್, ರೇಣುಕಾ ಗುದಗನವರ, ಸುರೇಶ ಗುದಗನವರ, ಡಾ ರತ್ನಾ ಕಡಪಟ್ಟಿ, ಡಾ ರಾಜಶ್ರೀ ಗುದಗನವರ, ಶಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಡಾ ಸೌಭಾಗ್ಯ ಜಾದವ್ ಸ್ವಾಗತಿಸಿದರು. ಡಾ ಗೌರಿ ಕೇರಿಮಠ ಪರಿಚಸಿದರು. ಡಾ ಬೀಬಿ ಆಯುಷಾ ಚಕೋಲಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 