ರೈತರ ಜಮೀನು ವಾಪಸ್ಸು ನೀಡಿ, ಇಲ್ಲವಾದಲ್ಲಿ ಸೂಕ್ತ ಭೂ ಬೆಲೆ ನೀಡಿ : ಕರವೇ ಅಧ್ಯಕ್ಷ ಸಂಪತ್ ಆಗ್ರಹ
Return the land to the farmers, or else pay the appropriate land price: Karave President Sampath dem
ಲೋಕದರ್ಶನ ವರದಿ
ಕಂಪ್ಲಿ 20: ಮಿತ್ತಲ್ಗೆ ನೀಡಿದ್ದ ರೈತರ ಭೂಮಿಯನ್ನು ಕೆಐಎಡಿಬಿ ಸರ್ಕಾರದೊಂದಿಗೆ ಶಾಮಿಲಾಗಿ ಜಿಂದಾಲ್ಗೆ ಪರಭಾರೆ ಮಾಡಿದೆ. ಕೂಡಲೇ ಸರ್ಕಾರ ಮಧ್ಯಸ್ಥಿಕೆವಹಿಸಿ ಇಲ್ಲಿನ ಸಾವಿರಾರು ರೈತರ ಭೂಮಿಯನ್ನು ವಾಪಸ್ಸು ನೀಡಬೇಕು. ಇಲ್ಲವಾದಲ್ಲಿ ಸೂಕ್ತ ಭೂ ಪರಿಹಾರ ಒದಗಿಸಬೇಕು ಎಂದು ನಮ್ಮ ಕರ್ನಾಟಕ ರಕ್ಷಣಾ ವೇದಿಕೆ(ಯುವಸೇನೆ)ಯ ಕುಡತಿನಿ ಘಟಕ ಅಧ್ಯಕ್ಷ ಸಂಪತ್ ಒತ್ತಾಯಿಸಿದರು ಕುಡತಿನಿ ಪಟ್ಟಣದಲ್ಲಿ ಬುಧವಾರದಂದು ಭೂ ಸಂತ್ರಸ್ತ ರೈತರಿಗೆ ನ್ಯಾಯ ಸಿಗಬೇಕೆಂಬ ನಿಟ್ಟಿನಲ್ಲಿ ಕಳೆದ ಮೂರು ವರ್ಷದಿಂದ ನಿರಂತರವಾಗಿ ಹಮ್ಮಿಕೊಂಡು ಇಂದಿಗೆ 1251ನೇ ದಿನ ಮತ್ತು 9ನೇ ದಿನದ ಉಪವಾಸ ಸತ್ಯಾಗ್ರಹ ಹೋರಾಟದಲ್ಲಿ ಭಾಗವಹಿಸಿ, ಬೆಂಬಲ ನೀಡಿದ ನಂತರ ಮಾತನಾಡಿ, ಕೆಐಎಡಿಬಿಯು ಮಿತ್ತಲ್ ಕಂಪನಿಗಾಗಿ 2012ರಲ್ಲಿ ಸ್ವಾಧೀನ ಮಾಡಿಕೊಂಡಿದ್ದ ಸಾವಿರಾರು ಎಕರೆಯಷ್ಟು ಜಮೀನನ್ನು ಈಗ ಅಕ್ರಮವಾಗಿ ಜಿಂದಾಲ್ ಕಂಪನಿಗೆ ನೀಡಲಾಗಿದೆ. ಯಾವ ಉದ್ದೇಶಕ್ಕೆ ವಶಕ್ಕೆ ಪಡೆಯಲಾಗಿತ್ತೋ ಅದೇ ಉದ್ದೇಶಕ್ಕೆ ಭೂಮಿ ಬಳಸಬೇಕಿತ್ತು.
ಈಗ ಜಿಂದಾಲ್ಗೆ ಹಸ್ತಾಂತರ ಮಾಡುತ್ತಿರುವುದು ರೈತರ ಹಿತಾಸಕ್ತಿಗೆ ವಿರುದ್ಧವಾದೆ. ಭೂ ಪರಭಾರೆ ವಿರೋಧಿಸಿ ನಿರಂತರವಾಗಿ ಧರಣಿ ಸತ್ಯಾಗ್ರಹ ಮತ್ತು ಉಪವಾಸದ ಹೋರಾಟ ಮಾಡುತ್ತಿದ್ದಾರೆ. ಆದರೆ, ಜನಪ್ರತಿನಿಧಿಗಳು, ಅಧಿಕಾರಿಗಳು ಕುಮ್ಮಕ್ಕು ನೀಡಿ ಪೊಲೀಸರ ಮೂಲಕ ಹೋರಾಟ ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ಭೂ ಪ್ರವೇಶದ ವೇಳೆ ಬೈಪಾಸ್ ರಸ್ತೆಯಲ್ಲಿ ರೈತರನ್ನು ತಡೆಗಟ್ಟಿ, ರೈತರಿಗೆ ನ್ಯಾಯ ಸಿಗದ ರೀತಿಯಲ್ಲಿ ಪಿತೂರಿ ನಡೆಸಲಾಗುತ್ತಿದೆ. ಎಷ್ಟೇ ಪಿತೂರಿ ಮತ್ತು ಷಡ್ಯಾಂತ್ರ ಮಾಡಿದರೂ, ರೈತರ ಹೋರಾಟ ನಿಲ್ಲದು. ಈ ಹೋರಾಟಕ್ಕೆ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ(ಯುವಸೇನೆ)ಯ ಬೆಂಬಲ ಸದಾ ಇದೆ ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಮೀರಿಯಲ ಶ್ರೀನಿವಾಸ, ಜಮ್ಮಯ್ಯ, ಎಂ.ಮಾರೇಶ್, ಟೈಗರ್, ರವಿ, ಅಂಬರೀಶ್, ತಿಮ್ಮಪ್ಪ, ಗಂಗಾಧರ, ಭಾವಿ ಶಿವಕುಮಾರ್, ಕಾಸಿಂ, ರಾಮಣ್ಣ, ಜಂಗ್ಲಿ ಸಾಬ್, ದಿವಾಕರಬಾಬು, ವೀರಭದ್ರ, ವಿವೇಕಾನಂದ, ಹಾಲಪ್ಪ ಗೀರೀಶ್, ರೈತರು ಮತ್ತು ರೈತ ಮಹಿಳೆಯರು ಹಾಗೂ ಇತರರು ಇದ್ದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 