ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿಯವರಿಂದ ದೇಶದಲ್ಲಿನ ಕೊವಿದ್-19 ಪರಿಸ್ಥಿತಿ ಪರಾಮರ್ಶೆ
ನವದೆಹಲಿ, ಏಪ್ರಿಲ್ 2, ಕೊವಿದ್ -19 ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮುಖ್ಯಮಂತ್ರಿಗಳೊಂದಿಗೆ ಪರಾಮರ್ಶೆ ಸಭೆ ನಡೆಸಿದರು.ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಆರೋಗ್ಯ ಸಚಿವ ಹರ್ಷವರ್ಧನ್ ಈ ವೇಳೆ ಉಪಸ್ಥಿತರಿದ್ದರು.ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈ ರಾಮ್ ಠಾಕೂರ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ವಿಡಿಯೋ ಕಾನ್ಫರೆನ್ಸಿಂಗ್ ನಲ್ಲಿ ಪಾಲ್ಗೊಂಡಿದ್ದರು. ದೇಶದಲ್ಲಿ ಹೊಸ 298 ಪ್ರಕರಣಗಳು ದೃಢಪಡುವುದರೊಂದಿಗೆ ಸೋಂಕಿತ ಒಟ್ಟು ಪ್ರಕರಣಗಳ ಸಂಖ್ಯೆ 1,965 ಕ್ಕೆ ಏರಿದೆ. ದೇಶಾದ್ಯಂತ ಇನ್ನೂ 12 ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 50 ಕ್ಕೆ ತಲುಪಿದೆ ಎಂದು ಸರ್ಕಾರ ತಿಳಿಸಿದೆ.ಗುರುವಾರ ಬೆಳಿಗ್ಗೆವರೆಗೆ ಸಕ್ರಿಯ ಕೊವಿದ್-19 ಪ್ರಕರಣಗಳ ಸಂಖ್ಯೆ 1,764 ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಒಟ್ಟು 150 ಪ್ರಕರಣಗಳನ್ನು ಗುಣಪಡಿಸಲಾಗಿದ್ದು, ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದೆ ಎಂದು ಎಂದು ಸಚಿವಾಲಯ ತಿಳಿಸಿದೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 