ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿಯವರಿಂದ ದೇಶದಲ್ಲಿನ ಕೊವಿದ್-19 ಪರಿಸ್ಥಿತಿ ಪರಾಮರ್ಶೆ
ನವದೆಹಲಿ, ಏಪ್ರಿಲ್ 2, ಕೊವಿದ್ -19 ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮುಖ್ಯಮಂತ್ರಿಗಳೊಂದಿಗೆ ಪರಾಮರ್ಶೆ ಸಭೆ ನಡೆಸಿದರು.ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಆರೋಗ್ಯ ಸಚಿವ ಹರ್ಷವರ್ಧನ್ ಈ ವೇಳೆ ಉಪಸ್ಥಿತರಿದ್ದರು.ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈ ರಾಮ್ ಠಾಕೂರ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ವಿಡಿಯೋ ಕಾನ್ಫರೆನ್ಸಿಂಗ್ ನಲ್ಲಿ ಪಾಲ್ಗೊಂಡಿದ್ದರು. ದೇಶದಲ್ಲಿ ಹೊಸ 298 ಪ್ರಕರಣಗಳು ದೃಢಪಡುವುದರೊಂದಿಗೆ ಸೋಂಕಿತ ಒಟ್ಟು ಪ್ರಕರಣಗಳ ಸಂಖ್ಯೆ 1,965 ಕ್ಕೆ ಏರಿದೆ. ದೇಶಾದ್ಯಂತ ಇನ್ನೂ 12 ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 50 ಕ್ಕೆ ತಲುಪಿದೆ ಎಂದು ಸರ್ಕಾರ ತಿಳಿಸಿದೆ.ಗುರುವಾರ ಬೆಳಿಗ್ಗೆವರೆಗೆ ಸಕ್ರಿಯ ಕೊವಿದ್-19 ಪ್ರಕರಣಗಳ ಸಂಖ್ಯೆ 1,764 ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಒಟ್ಟು 150 ಪ್ರಕರಣಗಳನ್ನು ಗುಣಪಡಿಸಲಾಗಿದ್ದು, ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದೆ ಎಂದು ಎಂದು ಸಚಿವಾಲಯ ತಿಳಿಸಿದೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 