ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ ಜನಪರ ಕ್ರಮ - ರಾಘವೇಂದ್ರ ಪಾಲನಕರ

ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ ಜನಪರ ಕ್ರಮ - ರಾಘವೇಂದ್ರ ಪಾಲನಕರ  Revision of Gruha Jyothi and Gruha Lakshmi schemes is a pro-people measure – Raghavendra Palanakar

ಗದಗ  2: ರಾಜ್ಯ ಸರ್ಕಾರ ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳನ್ನು ಪರಿಷ್ಕರಿಸಲು ಕೈಗೊಂಡಿರುವ ಕ್ರಮವು ನೈಜ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಷುಷಹಿ್ಪೈಳಿಷ್ಫ್ಘ್ತ ನಗರ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಕ್ತಾರ ರಾಘವೇಂದ್ರ ಪಾಲನಕರ ತಿಳಿಸಿದ್ದಾರೆ.  

ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐತಿಹಾಸಿಕ ಪಂಚ ಗ್ಯಾರಂಟಿ ಯೋಜನೆಗಳು ಬಡ ಹಾಗೂ ಮಧ್ಯಮ ವರ್ಗದ ಜನರ ಆರ್ಥಿಕ ಬಲವರ್ಧನೆಗೆ ಸಹಕಾರಿಯಾಗಿವೆ. ಆದರೆ ಕೆಲವು ಕಡೆಗಳಲ್ಲಿ ಅನರ್ಹರು ಯೋಜನೆಗಳ ಸೌಲಭ್ಯ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಪರಿಷ್ಕರಣೆಗೆ ಮುಂದಾಗಿದೆ ಎಂದು ಹೇಳಿದರು.  

ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳ ಪರಿಷ್ಕರಣೆಯೊಂದಿಗೆ ನಾಗರಿಕರ ಮಾಹಿತಿಯನ್ನು ಸಮರ​‍್ಕವಾಗಿ ಪರೀಶೀಲಿಸುವ ಮೂಲಕ ನೈಜ ಫಲಾನುಭವಿಗಳನ್ನು ಗುರುತಿಸಲು ಅನುಕೂಲವಾಗಲಿದೆ. ಇದರಿಂದ ಸರ್ಕಾರದ ಸೌಲಭ್ಯಗಳು ಅರ್ಹರಿಗೆ ಮಾತ್ರ ತಲುಪುವಂತೆ ಮಾಡಬಹುದು ಎಂದು ಅವರು ಅಭಿಪ್ರಾಯಪಟ್ಟರು.  

ಜಾತಿ ಆಧಾರಿತ ಸಮಗ್ರ ಮಾಹಿತಿ ಸಂಗ್ರಹದಿಂದ ರಾಜ್ಯದ ವಿವಿಧ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಗಳ ಕುರಿತು ನಿಖರ ಮಾಹಿತಿ ಲಭ್ಯವಾಗಲಿದ್ದು, ಮುಂದಿನ ದಿನಗಳಲ್ಲಿ ಜನಪರ ಯೋಜನೆಗಳನ್ನು ಪರಿಣಾಮಕಾರಿಯಾಗಿ ರೂಪಿಸಲು ಸರ್ಕಾರಕ್ಕೆ ನೆರವಾಗಲಿದೆ ಎಂದು ರಾಘವೇಂದ್ರ ಪಾಲನಕರ ತಿಳಿಸಿದ್ದಾರೆ.