ರಿಷಿ ನಿಧನಕ್ಕೆ ಕ್ರೀಡಾ ಪಟುಗಳ ಕಂಬನಿ
ನವದೆಹಲಿ, ಏ.30, ಹಿರಿಯ ನಟ ರಿಷಿ ಕಪೂರ್ ನಿಧನಕ್ಕೆ ಚಿತ್ರ ರಂಗ ಹಾಗೂ ಗಣ್ಯಾತಿ ಗಣ್ಯರು ಕಂಬನಿ ಮಿಡಿದಿದ್ದಾರೆ. ಭಾರತದ ಖ್ಯಾತ ನಾಮ ಕ್ರೀಡಾ ಪಟುಗಳು ಸಹ ರಿಷಿ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.“ನಿನ್ನೆ ಇರ್ಫಾನ್ ಖಾನ್, ಇಂದು ರಿಷಿ ಕಪೂರ್ ನಿಧನ. ಈ ಸುದ್ದಿ ಕೇಳಲೇ ತುಂಬ ನೋವಾಗುತ್ತಿದೆ. ರಿಷಿ ಅವರ ಆತ್ಮಕ್ಕೆ ಭಗಂವತ ಶಾಂತಿ ನೀಡಲಿ, ಕುಟಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ” ಎಂದು ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಟ್ವೀಟ್ ಮಾಡಿದ್ದಾರೆ. ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸಹ ರಿಷಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ನಾನು ಅವರ ಚಿತ್ರವನ್ನು ನೋಡುತ್ತಲೆ ಬೆಳೆದಿದ್ದೇನೆ” ಎಂದು ಅವರು ರಿಷಿ ಅವರೊಂದಿಗಿನ ಒಡನಾಟವನ್ನು ನೆನಪಿಸಿಕೊಂಡಿದ್ದಾರೆ. ಬಾಕ್ಸರ್ ವಿಜೇಂದ್ರ ಸಿಂಗ್, ಮಾಜಿ ಟೆನಿಸ್ ಆಟಗಾರ ಮಹೇಶ್ ಭೂಪತಿ, ಸಾನಿಯಾ ಮಿರ್ಜಾ, ಬ್ಯಾಡ್ಮಿಂಟನ್ ಆಟಗಾರ ಸೈನಾ ನೆಹ್ವಾಲ್, ಟರ್ಬನೇಟರ್ ಹರ್ಭಜನ್ ಸಿಂಗ್, ಕುಸ್ತಿ ಪಟುಗಳಾದ ಸಾಕ್ಷಿ ಮಲೀಕ್, ಸುಶೀಲ್ ಕುಮಾರ್, ಗೀತಾ ಪೋಗಟ್ ಅವರು ಸಹ ಸಂತಾಪ ಸೂಚಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 